ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

ಹೌದು, ಮಧ್ಯರಾತ್ರಿ ಇದ್ದಕ್ಕಿದ್ದಂತೆ ಸಮೀರ್ ಆಚಾರ್ಯವರನ್ನು ಎಲಿಮಿನೇಟ್ ಮಾಡುವ ಮುಖಾಂತರ ಉಳಿದ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಸಂಚಿಕೆ 5ರ ಫೈನಲ್ ತಲುಪಿದ್ದಾರೆ. ದಿವಾಕರ್,ನಿವೇದಿತಾ ಗೌಡ,ಶ್ರುತಿ ಪ್ರಕಾಶ್,ಜಯರಾಂ ಕಾರ್ತಿಕ್,ಮತ್ತು ಚಂದನ್ ಶೆಟ್ಟಿ ಈ 5 ಜನರ ಗ್ರಾಂಡ್ ಪಿನಾಲೆ ತಲುಪಿದ್ದಾರೆ.
ಬಿಗ್ ಬಾಸ್ ಸಂಚಿಕೆ 5ರ ಪಟ್ಟಕ್ಕೆ ನೆನ್ನೆಯಿಂದಲೇ ವೋಟಿಂಗ್ ಶುರುವಾಗಿದೆ.ಈ 5 ಜನರಲ್ಲಿ ದಿವಾಕರ್ ಉಳಿದಂತೆ 4 ಜನ ಸೇಲೆಬ್ರೆಟಿಗಳಾಗಿದ್ದು, ಕಾಮನ್ ಮ್ಯಾನ್ Vs ಸೇಲೆಬ್ರೆಟಿಸ್ ಇವರಲ್ಲಿ ಯಾರೂ ಗೆಲ್ಲುತ್ತಾರೆಂಬ ಕುತೂಹಲ ಜನರಲ್ಲಿ ಇಮ್ಮಡಿಗೊಂಡಿದೆ.ಹಾಗಾದ್ರೆ ವೀಕ್ಷಕರು ಹೇಳುವ ಪ್ರಕಾರ ಯಾರು ಗೆಲ್ಬೇಕು ಎಂಬ ವಿವರ ಇಲ್ಲಿದೆ ಮುಂದೆ ನೋಡಿ…

ನಿವೇದಿತಾ ಗೌಡ ಹುಟ್ಟಿದ್ದು ಮತ್ತು ಬೆಳೆದಿದ್ದು ಮೈಸೂರಿನಲ್ಲಿಯೇ. ಆದರೂ ಆಕೆಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಏಕೆಂದರೆ ಆಕೆ ಓದಿದ ಶಾಲೆ ಅಟಾಮಿಕ್ ಎನರ್ಜಿ ಸ್ಕೂಲಿನಲ್ಲಿ. ಶಾಲೆಯಲ್ಲಿ ಕನ್ನಡ ಇಲ್ಲದ ಕಾರಣ ಕನ್ನಡ ಬರೆಯಲು ಗೊತ್ತಿಲ್ಲ, ಶಾಲೆಯಲ್ಲಿ ಮಾತಾಡಲು ಸಹ ಇಲ್ಲದಿರುವುದರಿಂದ ಕನ್ನಡ ಆಕೆಗೆ ಮಾತಾಡಲು ತುಂಬ ಕಷ್ಟ. ಮನೆಯಲ್ಲಿ ಕನ್ನಡ, ಶಾಲಾ ಕಾಲೇಜ್ನಲ್ಲಿ ಇಂಗ್ಲಿಷ್, ಇವೆರಡು ಮಿಶ್ರಣವಾಗಿ ಇಂಗ್ಲಿಷ್ ಸ್ಟೈಲಿನ ಕನ್ನಡ ಮಾತನಾಡುತ್ತಾರೆ. ನಿವೇದಿತಾ ಈಗ ಮೈಸೂರಿನ ಮಹಾಜನ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾರೆ. ಆಕೆಯ ವಯಸ್ಸು 18. ಬಿಗ್ಬಾಸ್ ಇತಿಹಾಸದಲ್ಲಿ ಅತೀ ಕಡಿಮೆ ವಯಸ್ಸಿನ ಸ್ಪರ್ಧಿಯಾಗಿದ್ದಾರೆ.ತಂದೆ ರಮೇಶ್ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಒಬ್ಬ ಕಿರಿಯ ಸಹೋದರ ಇದ್ದಾನೆ.
ಡಬ್ ಸ್ಮ್ಯಾಶ್ ಮಾಡುವುದರಲ್ಲಿ ನಿವೇದಿತಾ ಗೌಡ ಎತ್ತಿದ ಕೈ. ನಿಜ ಹೇಳಬೇಕು ಅಂದ್ರೆ, ಡಬ್ ಸ್ಮ್ಯಾಶ್ ಜಗತ್ತಿನಲ್ಲಿ ನಿವೇದಿತಾ ಸೂಪರ್ ಸ್ಟಾರ್. ಕನ್ನಡದ ಸೂಪರ್ ಹಿಟ್ ಡೈಲಾಗ್ ಗಳನ್ನು ತಮ್ಮದೇ ಶೈಲಿಯಲ್ಲಿ ನಿವೇದಿತಾ ಹೇಳಿದ್ದಾರೆ. ಡಬ್ ಸ್ಮ್ಯಾಶ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಈಕೆ ಈಗ ಅದರಿಂದಲೇ ‘ಬಿಗ್ ಬಾಸ್’ ಎಂಬ ದೊಡ್ಡ ಕಾರ್ಯಕ್ರಮಕ್ಕೆ ಬಂದು, ಟಾಪ್ 5ರಲ್ಲಿ ತಮ್ಮ ಸ್ಥಾನ ಗಳಿಸುವ ಮೂಲಕ ಮೋಡಿ ಮಾಡಿದ್ದಾರೆ.

ಜಯರಾಂ ಕಾರ್ತಿಕ್ ಒಬ್ಬ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ 2012-15ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ “ಸೂಪರ್ಸ್ಟಾರ್” ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು.2014 ರಲ್ಲಿ ತೆರೆಕಂಡ ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ಮಾಡಿದ್ದಾರೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಸ್ಪರ್ದಿಸಿದ್ದ ಇವರು, ಈಗ ಟಾಪ್ 5 ತಲುಪುವ ಮೂಲಕ ಬಿಗ್ ಬಾಸ್ ಪಟ್ಟ ಗೆಲ್ಲುವಲ್ಲಿ ಮುನ್ನುಗ್ಗುತ್ತಿದ್ದಾರೆ.

ಚಂದನ್ ಶೆಟ್ಟಿ, ಇದು 2012ರಿಂದಲೇ ಕನ್ನಡ ಸಿನಿಮಾಗಳಲ್ಲಿ ಕೇಳುತ್ತಿದ್ದ, ಕಾಣುತ್ತಿದ್ದ ಹೆಸರು. ಹಾಡುಗಳನ್ನು ಬರೆಯುವ, ಹಾಡುವ ಮತ್ತು ಸಂಗೀತ ಸಂಯೋಜಿಸುವ ಚಂದನ್ ಶೆಟ್ಟಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ್ದರೂ ಒಂದು ಐಡೆಂಟಿಟಿ ಎಂದು ಕೊಟ್ಟಿದ್ದು ‘ಧಮ್ ಪವರ್ರೇ…’ ಪುನೀತ್ ರಾಜಕುಮಾರ್ ಅಭಿನಯದ ‘ಪವರ್’ ಚಿತ್ರದ ಈ ಶೀರ್ಷಿಕೆ ಗೀತೆ ಬರೆದು, ಹಾಡಿದ ಚಂದನ್ ಒಮ್ಮೆಲೇ ಲೈಮ್ಲೈಟ್ಗೆ ಬಂದರು.
ಹಾಸನ ಚಂದನ್ ಹುಟ್ಟೂರಾದರೂ ಬೆಳೆದಿದ್ದು ಸಕಲೇಶಪುರದಲ್ಲಿ. ಅಲ್ಲಿ ಹೈಸ್ಕೂಲ್ ಮುಗಿಸಿ ಪುತ್ತೂರಲ್ಲಿ ಪಿಯು ಓದಿ, ಮೈಸೂರಿಗೆ ಬಂದು ಬಿಬಿಎಂ ಮುಗಿಸಿದರು. ಉದ್ಯೋಗದ ಬೆನ್ನು ಹತ್ತಿ ಕಾಲ್ಸೆಂಟರ್ನಲ್ಲಿ ಒಂದು ವರ್ಷ ಕೆಲಸವನ್ನೂ ಮಾಡಿದರು.
ಸಂಗೀತದ ಕಡೆಗೆ ಸೆಳೆಯುತ್ತಿದ್ದ ಮನಸು ಕಾಲ್ಸೆಂಟರ್ ಬಿಡಿಸಿತು. ಬೆಂಗಳೂರಲ್ಲಿ ಯಾವುದಾದರೂ ನೌಕರಿ ಹಿಡಿದರೆ ಸಂಗೀತವನ್ನೂ ಜೊತೆಯಲ್ಲೇ ತೂಗಿಸಿಕೊಂಡು ಹೋಗಬಹುದು ಎಂದುಕೊಂಡು ಬೆಂಗಳೂರಿಗೆ ಬಂದರು.ಕಂಡ ಕನಸು ಕೈಗೂಡಿದಂತೆ ಅರ್ಜುನ್ ಜನ್ಯ ಅವರ ಶಿಷ್ಯತ್ವವೂ ಸಿಕ್ಕಿತು. ಅವರ ಜೊತೆ ಚಂದನ್ ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ‘ಅಲೆಮಾರಿ’ ಚಿತ್ರದಲ್ಲಿ ಹಾಡುವ ಮೂಲಕ ಚಂದನ್ ಹಾಡಿನ ಬಂಡಿಯೂ ಆರಂಭವಾಯಿತು.ಹೀಗೆ ತಮ್ಮ ವಿಶಿಷ್ಟ ಗಾಯನದ ಮೂಲಕ ಹೆಸರು ಮಾಡಿರುವ ಇವರು ಬಿಗ್ ಬಾಸ್’ನಲ್ಲಿ ಸ್ಪರ್ದಿಸಿ ಟಾಪ್ 5ರ ಹಂತಕ್ಕೆ ತಲುಪಿ, ಇವರು ಕೂಡ ಬಿಗ್ ಬಾಸ್ ಸಂಚಿಕೆ 5ರ ಗೆಲ್ಲುವ ಕುದುರೆ ಎಂದು ಹೇಳಲಾಗುತ್ತಿದೆ.

ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್, ಬೆಳಗಾವಿಯಲ್ಲಿ ಹುಟ್ಟಿದ, ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ ‘ಬಿಗ್ ಬಾಸ್’ ಒಂದು ಒಳ್ಳೆಯ ವೇದಿಕೆಯಾಗಿದ್ದು, ಸಮರ್ಥವಾಗಿ ಉಪಯೋಗಿಸಿಕೊಂಡಿದ್ದಾರೆ ಕೂಡ.ಜಯರಾಂ ಕಾರ್ತಿಕ್ ಜೊತೆ ತುಂಬಾ ಸ್ನೇಹದಿಂದ ಇವರ ಮೇಲೆ, ಜಯರಾಂರವರನ್ನು ಪ್ರೀತಿಸುತ್ತಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.ಇವರೂ ಕೂಡ ‘ಬಿಗ್ ಬಾಸ್ ಕನ್ನಡ-5’ ಕಾರ್ಯಕ್ರಮದ ಟಪ್ 5ರ ಸ್ಪರ್ದಿಯಾಗಿದ್ದು ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸೊಂಟ ನೋವು, ತಲೆನೋವು… ದೇಹದ ಯಾವುದೇ ನೋವಿರಲಿ… ನೆಗಡಿ, ಶೀತ, ಕೆಮ್ಮು.. ನಿಮಗೆ ಏನೇ ಆದರೂ… ಇವರ ಹತ್ತಿರ ಇದೆ ಔಷಧಿ. ಇವರೇ ಆಯುರ್ವೇದ ಪ್ರಾಡೆಕ್ಟ್ ಸೇಲ್ಸ್ ಮ್ಯಾನ್ ದಿವಾಕರ್. ನರಸೀಪುರದಲ್ಲಿ ಹುಟ್ಟಿ ಮಡಿಕೇರಿಯಲ್ಲಿ ಬೆಳೆದಿರುವ ದಿವಾಕರ್ ಹೊಟ್ಟೆ ಪಾಡಿಗಾಗಿ ಮಾಡದ ಕೆಲಸ ಇಲ್ಲ. ಎಮ್ಮೆ ಮೇಯಿಸುವುದರಿಂದ ಹಿಡಿದು ಹೋಟೆಲ್ ನಲ್ಲಿ ಕೆಲಸ, ಕೂಲಿ ಕೆಲಸ, ಗಾರೆ ಕೆಲಸ ಕೂಡ ಮಾಡಿರುವ ದಿವಾಕರ್ ಹೊಟ್ಟೆ ಹಸಿವಾದಾಗ ಭಿಕ್ಷೆ ಕೂಡ ಬೇಡಿದ್ದಾರಂತೆ.
ಇಷ್ಟೊಂದು ಕಷ್ಟಗಳಲ್ಲಿಯೇ ಬೆಳೆದು ಬಂದಿರುವ ಕಾಮಾನ್ ಮ್ಯಾನ್ ದಿವಾಕರ್ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಭಾಗವಹಿಸಿ, ಘಟಾನುಘಟಿ ಸೇಲೆಬ್ರೆಟಿಗಳ ಜೊತೆ ಸ್ಪರ್ದಿಸಿ ತಮ್ಮ ಪರಿಶ್ರಮದಿಂದ ಟಾಪ್ 5ರ ಹಂತ ತಲುಪಿದ್ದಾರೆ.ಬಿಗ್ ಬಾಸ್ ಪಟ್ಟ ಒಲಿಸಿಕೊಳ್ಳುವಲ್ಲಿ ಇವರು ಸೇಲೆಬ್ರೆಟಿಗಳಿಗಿಂತ ಮುಂದೆ ಇದ್ದು,ಗೆಲ್ಲುವ ನೆಚ್ಚಿನ ಸ್ಪರ್ದಿಯಾಗಿದ್ದಾರೆ.
ಜನರ ಅಭಿಪ್ರಾಯದ ಪ್ರಕಾರ ದಿವಾಕರ್’ರವರಿಗೆ ಹೆಚ್ಚಿಗೆ ವೋಟ್ ಮಾಡಿ ಗೆಲ್ಲಿಸಿ ಎಂದು ಸೋಶಿಯಲ್ ಮಿಡಿಯಾದಲ್ಲಿ ಅಭಿಯಾನ ಶುರುವಾಗಿದೆ.ನಮ್ಮ ಪ್ರಕಾರ ತುಂಬಾ ಕಷ್ಟದಿಂದಲೇ ಬಂದಿರುವ ಕಾಮನ್ ಮ್ಯಾನ್ ದಿವಾಕರ್ ಗೆದ್ದರೆ, ಅದು ಕಾಮನ್ ಮ್ಯಾನ್ ಸಿಕ್ಕ ಗೆಲುವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ…