News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

612

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

ಹೌದು, ಮಧ್ಯರಾತ್ರಿ ಇದ್ದಕ್ಕಿದ್ದಂತೆ ಸಮೀರ್ ಆಚಾರ್ಯವರನ್ನು ಎಲಿಮಿನೇಟ್ ಮಾಡುವ ಮುಖಾಂತರ ಉಳಿದ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಸಂಚಿಕೆ 5ರ ಫೈನಲ್ ತಲುಪಿದ್ದಾರೆ. ದಿವಾಕರ್,ನಿವೇದಿತಾ ಗೌಡ,ಶ್ರುತಿ ಪ್ರಕಾಶ್,ಜಯರಾಂ ಕಾರ್ತಿಕ್,ಮತ್ತು ಚಂದನ್ ಶೆಟ್ಟಿ ಈ 5 ಜನರ ಗ್ರಾಂಡ್ ಪಿನಾಲೆ ತಲುಪಿದ್ದಾರೆ.

ಬಿಗ್ ಬಾಸ್ ಸಂಚಿಕೆ 5ರ ಪಟ್ಟಕ್ಕೆ ನೆನ್ನೆಯಿಂದಲೇ ವೋಟಿಂಗ್ ಶುರುವಾಗಿದೆ.ಈ 5 ಜನರಲ್ಲಿ ದಿವಾಕರ್ ಉಳಿದಂತೆ 4 ಜನ ಸೇಲೆಬ್ರೆಟಿಗಳಾಗಿದ್ದು, ಕಾಮನ್ ಮ್ಯಾನ್ Vs ಸೇಲೆಬ್ರೆಟಿಸ್ ಇವರಲ್ಲಿ ಯಾರೂ ಗೆಲ್ಲುತ್ತಾರೆಂಬ ಕುತೂಹಲ ಜನರಲ್ಲಿ ಇಮ್ಮಡಿಗೊಂಡಿದೆ.ಹಾಗಾದ್ರೆ ವೀಕ್ಷಕರು ಹೇಳುವ ಪ್ರಕಾರ ಯಾರು ಗೆಲ್ಬೇಕು ಎಂಬ ವಿವರ ಇಲ್ಲಿದೆ ಮುಂದೆ ನೋಡಿ…

ನಿವೇದಿತಾ ಗೌಡ:-  

ನಿವೇದಿತಾ ಗೌಡ ಹುಟ್ಟಿದ್ದು ಮತ್ತು ಬೆಳೆದಿದ್ದು ಮೈಸೂರಿನಲ್ಲಿಯೇ. ಆದರೂ ಆಕೆಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಏಕೆಂದರೆ ಆಕೆ ಓದಿದ ಶಾಲೆ ಅಟಾಮಿಕ್ ಎನರ್ಜಿ ಸ್ಕೂಲಿನಲ್ಲಿ. ಶಾಲೆಯಲ್ಲಿ ಕನ್ನಡ ಇಲ್ಲದ ಕಾರಣ ಕನ್ನಡ ಬರೆಯಲು ಗೊತ್ತಿಲ್ಲ, ಶಾಲೆಯಲ್ಲಿ ಮಾತಾಡಲು ಸಹ ಇಲ್ಲದಿರುವುದರಿಂದ ಕನ್ನಡ ಆಕೆಗೆ ಮಾತಾಡಲು ತುಂಬ ಕಷ್ಟ. ಮನೆಯಲ್ಲಿ ಕನ್ನಡ, ಶಾಲಾ ಕಾಲೇಜ್ನಲ್ಲಿ ಇಂಗ್ಲಿಷ್, ಇವೆರಡು ಮಿಶ್ರಣವಾಗಿ ಇಂಗ್ಲಿಷ್ ಸ್ಟೈಲಿನ ಕನ್ನಡ ಮಾತನಾಡುತ್ತಾರೆ. ನಿವೇದಿತಾ ಈಗ ಮೈಸೂರಿನ ಮಹಾಜನ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾರೆ. ಆಕೆಯ ವಯಸ್ಸು 18. ಬಿಗ್ಬಾಸ್ ಇತಿಹಾಸದಲ್ಲಿ ಅತೀ ಕಡಿಮೆ ವಯಸ್ಸಿನ ಸ್ಪರ್ಧಿಯಾಗಿದ್ದಾರೆ.ತಂದೆ ರಮೇಶ್ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಒಬ್ಬ ಕಿರಿಯ ಸಹೋದರ ಇದ್ದಾನೆ.

ಡಬ್ ಸ್ಮ್ಯಾಶ್ ಮಾಡುವುದರಲ್ಲಿ ನಿವೇದಿತಾ ಗೌಡ ಎತ್ತಿದ ಕೈ. ನಿಜ ಹೇಳಬೇಕು ಅಂದ್ರೆ, ಡಬ್ ಸ್ಮ್ಯಾಶ್ ಜಗತ್ತಿನಲ್ಲಿ ನಿವೇದಿತಾ ಸೂಪರ್ ಸ್ಟಾರ್. ಕನ್ನಡದ ಸೂಪರ್ ಹಿಟ್ ಡೈಲಾಗ್ ಗಳನ್ನು ತಮ್ಮದೇ ಶೈಲಿಯಲ್ಲಿ ನಿವೇದಿತಾ ಹೇಳಿದ್ದಾರೆ. ಡಬ್ ಸ್ಮ್ಯಾಶ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಈಕೆ ಈಗ ಅದರಿಂದಲೇ ‘ಬಿಗ್ ಬಾಸ್’ ಎಂಬ ದೊಡ್ಡ ಕಾರ್ಯಕ್ರಮಕ್ಕೆ ಬಂದು, ಟಾಪ್ 5ರಲ್ಲಿ ತಮ್ಮ ಸ್ಥಾನ ಗಳಿಸುವ ಮೂಲಕ ಮೋಡಿ ಮಾಡಿದ್ದಾರೆ.

ಜಯರಾಂ ಕಾರ್ತಿಕ್:-

ಜಯರಾಂ ಕಾರ್ತಿಕ್ ಒಬ್ಬ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ 2012-15ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ “ಸೂಪರ್‍ಸ್ಟಾರ್” ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು.2014 ರಲ್ಲಿ ತೆರೆಕಂಡ  ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ಮಾಡಿದ್ದಾರೆ.

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಸ್ಪರ್ದಿಸಿದ್ದ ಇವರು, ಈಗ ಟಾಪ್ 5 ತಲುಪುವ ಮೂಲಕ ಬಿಗ್ ಬಾಸ್ ಪಟ್ಟ ಗೆಲ್ಲುವಲ್ಲಿ ಮುನ್ನುಗ್ಗುತ್ತಿದ್ದಾರೆ.

ಚಂದನ್ ಶೆಟ್ಟಿ:-

ಚಂದನ್ ಶೆಟ್ಟಿ, ಇದು 2012ರಿಂದಲೇ ಕನ್ನಡ ಸಿನಿಮಾಗಳಲ್ಲಿ ಕೇಳುತ್ತಿದ್ದ, ಕಾಣುತ್ತಿದ್ದ ಹೆಸರು. ಹಾಡುಗಳನ್ನು ಬರೆಯುವ, ಹಾಡುವ ಮತ್ತು ಸಂಗೀತ ಸಂಯೋಜಿಸುವ ಚಂದನ್ ಶೆಟ್ಟಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ್ದರೂ ಒಂದು ಐಡೆಂಟಿಟಿ ಎಂದು ಕೊಟ್ಟಿದ್ದು ‘ಧಮ್ ಪವರ್ರೇ…’ ಪುನೀತ್ ರಾಜಕುಮಾರ್ ಅಭಿನಯದ ‘ಪವರ್’ ಚಿತ್ರದ ಈ ಶೀರ್ಷಿಕೆ ಗೀತೆ ಬರೆದು, ಹಾಡಿದ ಚಂದನ್ ಒಮ್ಮೆಲೇ ಲೈಮ್‌ಲೈಟ್‌ಗೆ ಬಂದರು.
ಹಾಸನ ಚಂದನ್ ಹುಟ್ಟೂರಾದರೂ ಬೆಳೆದಿದ್ದು ಸಕಲೇಶಪುರದಲ್ಲಿ. ಅಲ್ಲಿ ಹೈಸ್ಕೂಲ್ ಮುಗಿಸಿ ಪುತ್ತೂರಲ್ಲಿ ಪಿಯು ಓದಿ, ಮೈಸೂರಿಗೆ ಬಂದು ಬಿಬಿಎಂ ಮುಗಿಸಿದರು. ಉದ್ಯೋಗದ ಬೆನ್ನು ಹತ್ತಿ ಕಾಲ್‌ಸೆಂಟರ್‌ನಲ್ಲಿ ಒಂದು ವರ್ಷ ಕೆಲಸವನ್ನೂ ಮಾಡಿದರು.

ಸಂಗೀತದ ಕಡೆಗೆ ಸೆಳೆಯುತ್ತಿದ್ದ ಮನಸು ಕಾಲ್‌ಸೆಂಟರ್ ಬಿಡಿಸಿತು. ಬೆಂಗಳೂರಲ್ಲಿ ಯಾವುದಾದರೂ ನೌಕರಿ ಹಿಡಿದರೆ ಸಂಗೀತವನ್ನೂ ಜೊತೆಯಲ್ಲೇ ತೂಗಿಸಿಕೊಂಡು ಹೋಗಬಹುದು ಎಂದುಕೊಂಡು ಬೆಂಗಳೂರಿಗೆ ಬಂದರು.ಕಂಡ ಕನಸು ಕೈಗೂಡಿದಂತೆ ಅರ್ಜುನ್ ಜನ್ಯ ಅವರ ಶಿಷ್ಯತ್ವವೂ ಸಿಕ್ಕಿತು. ಅವರ ಜೊತೆ ಚಂದನ್ ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ‘ಅಲೆಮಾರಿ’ ಚಿತ್ರದಲ್ಲಿ ಹಾಡುವ ಮೂಲಕ ಚಂದನ್ ಹಾಡಿನ ಬಂಡಿಯೂ ಆರಂಭವಾಯಿತು.ಹೀಗೆ ತಮ್ಮ ವಿಶಿಷ್ಟ ಗಾಯನದ ಮೂಲಕ ಹೆಸರು ಮಾಡಿರುವ ಇವರು ಬಿಗ್ ಬಾಸ್’ನಲ್ಲಿ ಸ್ಪರ್ದಿಸಿ ಟಾಪ್ 5ರ ಹಂತಕ್ಕೆ ತಲುಪಿ, ಇವರು ಕೂಡ ಬಿಗ್ ಬಾಸ್ ಸಂಚಿಕೆ 5ರ ಗೆಲ್ಲುವ ಕುದುರೆ ಎಂದು ಹೇಳಲಾಗುತ್ತಿದೆ.

ಶ್ರುತಿ ಪ್ರಕಾಶ್ :-

ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್, ಬೆಳಗಾವಿಯಲ್ಲಿ ಹುಟ್ಟಿದ, ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ ‘ಬಿಗ್ ಬಾಸ್’ ಒಂದು ಒಳ್ಳೆಯ ವೇದಿಕೆಯಾಗಿದ್ದು, ಸಮರ್ಥವಾಗಿ ಉಪಯೋಗಿಸಿಕೊಂಡಿದ್ದಾರೆ ಕೂಡ.ಜಯರಾಂ ಕಾರ್ತಿಕ್ ಜೊತೆ ತುಂಬಾ ಸ್ನೇಹದಿಂದ ಇವರ ಮೇಲೆ, ಜಯರಾಂರವರನ್ನು ಪ್ರೀತಿಸುತ್ತಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.ಇವರೂ ಕೂಡ ‘ಬಿಗ್ ಬಾಸ್ ಕನ್ನಡ-5’ ಕಾರ್ಯಕ್ರಮದ ಟಪ್ 5ರ ಸ್ಪರ್ದಿಯಾಗಿದ್ದು ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

‘ಸೇಲ್ಸ್ ಮ್ಯಾನ್’ ದಿವಾಕರ್ “:-

ಸೊಂಟ ನೋವು, ತಲೆನೋವು… ದೇಹದ ಯಾವುದೇ ನೋವಿರಲಿ… ನೆಗಡಿ, ಶೀತ, ಕೆಮ್ಮು.. ನಿಮಗೆ ಏನೇ ಆದರೂ… ಇವರ ಹತ್ತಿರ ಇದೆ ಔಷಧಿ. ಇವರೇ ಆಯುರ್ವೇದ ಪ್ರಾಡೆಕ್ಟ್ ಸೇಲ್ಸ್ ಮ್ಯಾನ್ ದಿವಾಕರ್. ನರಸೀಪುರದಲ್ಲಿ ಹುಟ್ಟಿ ಮಡಿಕೇರಿಯಲ್ಲಿ ಬೆಳೆದಿರುವ ದಿವಾಕರ್ ಹೊಟ್ಟೆ ಪಾಡಿಗಾಗಿ ಮಾಡದ ಕೆಲಸ ಇಲ್ಲ. ಎಮ್ಮೆ ಮೇಯಿಸುವುದರಿಂದ ಹಿಡಿದು ಹೋಟೆಲ್ ನಲ್ಲಿ ಕೆಲಸ, ಕೂಲಿ ಕೆಲಸ, ಗಾರೆ ಕೆಲಸ ಕೂಡ ಮಾಡಿರುವ ದಿವಾಕರ್ ಹೊಟ್ಟೆ ಹಸಿವಾದಾಗ ಭಿಕ್ಷೆ ಕೂಡ ಬೇಡಿದ್ದಾರಂತೆ.

ಇಷ್ಟೊಂದು ಕಷ್ಟಗಳಲ್ಲಿಯೇ ಬೆಳೆದು ಬಂದಿರುವ ಕಾಮಾನ್ ಮ್ಯಾನ್ ದಿವಾಕರ್ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಭಾಗವಹಿಸಿ, ಘಟಾನುಘಟಿ ಸೇಲೆಬ್ರೆಟಿಗಳ ಜೊತೆ ಸ್ಪರ್ದಿಸಿ ತಮ್ಮ ಪರಿಶ್ರಮದಿಂದ ಟಾಪ್ 5ರ ಹಂತ ತಲುಪಿದ್ದಾರೆ.ಬಿಗ್ ಬಾಸ್ ಪಟ್ಟ ಒಲಿಸಿಕೊಳ್ಳುವಲ್ಲಿ ಇವರು ಸೇಲೆಬ್ರೆಟಿಗಳಿಗಿಂತ ಮುಂದೆ ಇದ್ದು,ಗೆಲ್ಲುವ ನೆಚ್ಚಿನ ಸ್ಪರ್ದಿಯಾಗಿದ್ದಾರೆ.

ಜನರ ಅಭಿಪ್ರಾಯದ ಪ್ರಕಾರ ದಿವಾಕರ್’ರವರಿಗೆ ಹೆಚ್ಚಿಗೆ ವೋಟ್ ಮಾಡಿ ಗೆಲ್ಲಿಸಿ ಎಂದು ಸೋಶಿಯಲ್ ಮಿಡಿಯಾದಲ್ಲಿ ಅಭಿಯಾನ ಶುರುವಾಗಿದೆ.ನಮ್ಮ ಪ್ರಕಾರ ತುಂಬಾ ಕಷ್ಟದಿಂದಲೇ ಬಂದಿರುವ ಕಾಮನ್ ಮ್ಯಾನ್ ದಿವಾಕರ್ ಗೆದ್ದರೆ, ಅದು ಕಾಮನ್ ಮ್ಯಾನ್ ಸಿಕ್ಕ ಗೆಲುವಾಗುತ್ತದೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.

  • ವಿಚಿತ್ರ ಆದರೂ ಸತ್ಯ

    ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…