ಉಪಯುಕ್ತ ಮಾಹಿತಿ

ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಮತ್ತು ಕೇಂದ್ರಸರ್ಕಾರದಿಂದ ಉಚಿತ ಗ್ಯಾಸ್ ಯೋಜನೆಗಳು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ…

990

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..

ಹೌದು ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಕ್ಕೆ ಒಟ್ಟು ಎರಡು ಯೋಜನೆಗಳಿವೆ..

ಒಂದು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ” 

ಇನ್ನೊಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ”

ಬಿ ಪಿ ಎಲ್ ಕಾರ್ಡ್ ಹೊಂದಿರುವವರು ಈ ಯೋಜನೆಗಳ ಮೂಲಕ ಉಚಿತ ಗ್ಯಾಸ್ ಕನೆಕ್ಷನ್ ಪಡೆಯಬಹುದಾಗಿದೆ..

ಹಾಗಾದ್ರೆ ಪ್ರಧಾನಮಂತ್ರಿ ಉಜ್ವಲ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗಳಿಂದ ಹೇಗೆ ಉಚಿತವಾಗಿ ಗ್ಯಾಸ್ ಪಡೆಯಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. 

ಪ್ರಧಾನ ಮಂತ್ರಿ ಉಜ್ವಲ ಯೋಜನೆ…

ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್‌ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್‌ಗಳಿಗೆ ಹಣ ನೀಡಬೇಕಾಗುತ್ತದೆ.ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…

ಅರ್ಹತೆ ಮಾನದಂಡ ಏನು..?

  • ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಹರಾಗಿದ್ದು, 18 ವರ್ಷ ಮೇಲ್ಪಟ್ಟಿರಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ನೀಡುವ ಬಿಪಿಎಲ್ ಕಾರ್ಡ್’ನ್ನು ಹೊದಿರಬೇಕು.

ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…

  • ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರು ಒಂದು ನಕಲು ಪ್ರತಿಯನ್ನು ಒದಗಿಸಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ . ಬಿಪಿಎಲ್ ಕಾರ್ಡ್’ನ್ನು ಒದಗಿಸಬೇಕು.
  • ಅಡ್ರೆಸ್ ಪ್ರೂಫ್’ಗಾಗಿ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
  • ಬ್ಯಾಂಕ್ ಅಕೌಂಟ್ ಇರಬೇಕು.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಹ ಕೊಡಬೇಕಾಗುತ್ತದೆ.

ಇಲ್ಲಿ ಓದಿ:-ಪ್ರಧಾನ “ಮಂತ್ರಿ ಆವಾಸ್ ಯೋಜನೆ” ಅಡಿಯಲ್ಲಿ ಸ್ವಂತ ಮನೆ ಪಡೆಯೋದು ಹೇಗೆ…

ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ..?

  • *  14.2 ಕೆಜಿ
  • *  ಗ್ಯಾಸ್ ಸ್ಟೋವ್,
  • *  ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.

ಪಡೆಯುವ ವಿಧಾನ ಹೇಗೆ…

ಹತ್ತಿರದ ಗ್ಯಾಸ್ ಏಜೆನ್ಸಿ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಕೊಡಬೇಕು.. 1 ತಿಂಗಳಲ್ಲಿ ಮನವಿ ಅಂಗೀಕಾರವಾಗಿ ಗ್ಯಾಸ್ ಏಜೆನ್ಸಿಯವರು 1600 ರೂಪಾಯಿ ಮೌಲ್ಯದ ಸಿಲಿಂಡರ್ ಹಾಗೂ ರೆಗ್ಯುಲೇಟರ್ ಅನ್ನು ಉಚಿತವಾಗಿ ನೀಡುತ್ತಾರೆ.. ಉಳಿದ ಗ್ಯಾಸ್ ಉಪಕರಣಗಳು ಬೇಕಿದ್ದರೆ ಹಣವನ್ನು ನೀಡಿ ಪಡೆದುಕೊಳ್ಳಬಹುದಾಗಿದೆ..

ಈಗ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಬಗ್ಗೆ ತಿಳಿಯೋಣ…

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಇದೇ ವರ್ಷದ ಡಿಸೆಂಬರ್‌ 1 2017 ರಿಂದ  ರಾಜ್ಯದಲ್ಲಿ ಜಾರಿಯಲ್ಲಿದೆ.

ಮೊದಲಿಗೆ ಅನಿಲ ಭಾಗ್ಯ ಯೋಜನೆಯನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಸಿಲಿಂಡರ್ ಪಡೆದ ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ವಿತರಿಸುವುದು ಎಂದಾಗಿತ್ತು.. ಆದರೆ ಆನಂತರ ಹೆಚ್ಚಿನ ಮಂದಿಗೆ ಇದರ ಉಪಯೋಗವಾಗುವುದಿಲ್ಲ ಎಂದು ಯೋಚಿಸಿ.. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಮೂಲಕ 15 ಲಕ್ಷ ಕುಟುಂಬ ಗಳಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ಕೊಡಲು ನಿರ್ಧರಿಸಿದ್ದಾರೆ..

ಅರ್ಜಿ ಸಲ್ಲಿಸುವುದು ಹೇಗೆ..?

ಬಿ ಪಿ ಎಲ್ ಕಾರ್ಡ್ ಹೊಂದಿರುವವರು ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೋಗಿ ಅರ್ಜಿ ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದಾಗಿದೆ..

ಉಚಿತ ಅನಿಲ ಭಾಗ್ಯ ಯೋಜನೆಯಲ್ಲಿ ಏನೆಲ್ಲಾ ಸಿಗಲಿದೆ..?

  • 14.2 ಕೆ ಜಿ ಸಿಲಿಂಡರ್,
  •  ಗ್ಯಾಸ್ ಸ್ಟವ್, ಹಾಗೂ
  • ರೆಗ್ಯುಲೇಟರ್
  • ಎರಡು ಬಾರಿ ಉಚಿತವಾಗಿ ಸಿಲಿಂಡರ್ ಅನ್ನು ಭರ್ತಿ ಮಾಡಿಕೊಡಲಾಗುತ್ತದೆ..

‘ಉಜ್ವಲ ಯೋಜನೆ’ ಹೊದಿರುವವರು ಇದಕ್ಕೆ ಅರ್ಹರಲ್ಲ…

ಇದಕ್ಕೆ ಮೊದಲು ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ  ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್‌ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ‍ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಈ ಯೋಜನೆಯಿಂದ ಸರ್ಕಾರ ಭಾರಿಸಲಿರುವ ವೆಚ್ಚ:-

ಈ ಯೋಜನೆಯಿಂದ ಸ್ಟೌವ್, ಕನೆಕ್ಟರ್ ಹಾಗೂ ಮೊದಲ ಎರಡು ಗ್ಯಾಸ್ ಸಿಲಿಂಡರ್ ಸರ್ಕಾರದ ಕಡೆಯಿಂದ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಸರ್ಕಾರಕ್ಕೆ ಪ್ರತಿ ಸಂಪರ್ಕಕ್ಕೆ 4,040 ರೂ. ವೆಚ್ಚ ತಗಲಿದೆ ಎಂದು ಹೇಳಲಾಗಿದೆ.ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 300 ಕೋಟಿ ರೂ. ವ್ಯಯಿಸಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಈ ಯೋಜನೆಯ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.. ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಸುದ್ದಿ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅನಾಹುತ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…