News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಮತ್ತು ಕೇಂದ್ರಸರ್ಕಾರದಿಂದ ಉಚಿತ ಗ್ಯಾಸ್ ಯೋಜನೆಗಳು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ…

1018

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..

ಹೌದು ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಕ್ಕೆ ಒಟ್ಟು ಎರಡು ಯೋಜನೆಗಳಿವೆ..

ಒಂದು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ” 

ಇನ್ನೊಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ”

ಬಿ ಪಿ ಎಲ್ ಕಾರ್ಡ್ ಹೊಂದಿರುವವರು ಈ ಯೋಜನೆಗಳ ಮೂಲಕ ಉಚಿತ ಗ್ಯಾಸ್ ಕನೆಕ್ಷನ್ ಪಡೆಯಬಹುದಾಗಿದೆ..

ಹಾಗಾದ್ರೆ ಪ್ರಧಾನಮಂತ್ರಿ ಉಜ್ವಲ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗಳಿಂದ ಹೇಗೆ ಉಚಿತವಾಗಿ ಗ್ಯಾಸ್ ಪಡೆಯಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. 

ಪ್ರಧಾನ ಮಂತ್ರಿ ಉಜ್ವಲ ಯೋಜನೆ…

ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್‌ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್‌ಗಳಿಗೆ ಹಣ ನೀಡಬೇಕಾಗುತ್ತದೆ.ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…

ಅರ್ಹತೆ ಮಾನದಂಡ ಏನು..?

  • ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಹರಾಗಿದ್ದು, 18 ವರ್ಷ ಮೇಲ್ಪಟ್ಟಿರಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ನೀಡುವ ಬಿಪಿಎಲ್ ಕಾರ್ಡ್’ನ್ನು ಹೊದಿರಬೇಕು.

ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…

  • ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರು ಒಂದು ನಕಲು ಪ್ರತಿಯನ್ನು ಒದಗಿಸಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ . ಬಿಪಿಎಲ್ ಕಾರ್ಡ್’ನ್ನು ಒದಗಿಸಬೇಕು.
  • ಅಡ್ರೆಸ್ ಪ್ರೂಫ್’ಗಾಗಿ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
  • ಬ್ಯಾಂಕ್ ಅಕೌಂಟ್ ಇರಬೇಕು.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಹ ಕೊಡಬೇಕಾಗುತ್ತದೆ.

ಇಲ್ಲಿ ಓದಿ:-ಪ್ರಧಾನ “ಮಂತ್ರಿ ಆವಾಸ್ ಯೋಜನೆ” ಅಡಿಯಲ್ಲಿ ಸ್ವಂತ ಮನೆ ಪಡೆಯೋದು ಹೇಗೆ…

ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ..?

  • *  14.2 ಕೆಜಿ
  • *  ಗ್ಯಾಸ್ ಸ್ಟೋವ್,
  • *  ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.

ಪಡೆಯುವ ವಿಧಾನ ಹೇಗೆ…

ಹತ್ತಿರದ ಗ್ಯಾಸ್ ಏಜೆನ್ಸಿ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಕೊಡಬೇಕು.. 1 ತಿಂಗಳಲ್ಲಿ ಮನವಿ ಅಂಗೀಕಾರವಾಗಿ ಗ್ಯಾಸ್ ಏಜೆನ್ಸಿಯವರು 1600 ರೂಪಾಯಿ ಮೌಲ್ಯದ ಸಿಲಿಂಡರ್ ಹಾಗೂ ರೆಗ್ಯುಲೇಟರ್ ಅನ್ನು ಉಚಿತವಾಗಿ ನೀಡುತ್ತಾರೆ.. ಉಳಿದ ಗ್ಯಾಸ್ ಉಪಕರಣಗಳು ಬೇಕಿದ್ದರೆ ಹಣವನ್ನು ನೀಡಿ ಪಡೆದುಕೊಳ್ಳಬಹುದಾಗಿದೆ..

ಈಗ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಬಗ್ಗೆ ತಿಳಿಯೋಣ…

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಇದೇ ವರ್ಷದ ಡಿಸೆಂಬರ್‌ 1 2017 ರಿಂದ  ರಾಜ್ಯದಲ್ಲಿ ಜಾರಿಯಲ್ಲಿದೆ.

ಮೊದಲಿಗೆ ಅನಿಲ ಭಾಗ್ಯ ಯೋಜನೆಯನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಸಿಲಿಂಡರ್ ಪಡೆದ ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ವಿತರಿಸುವುದು ಎಂದಾಗಿತ್ತು.. ಆದರೆ ಆನಂತರ ಹೆಚ್ಚಿನ ಮಂದಿಗೆ ಇದರ ಉಪಯೋಗವಾಗುವುದಿಲ್ಲ ಎಂದು ಯೋಚಿಸಿ.. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಮೂಲಕ 15 ಲಕ್ಷ ಕುಟುಂಬ ಗಳಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ಕೊಡಲು ನಿರ್ಧರಿಸಿದ್ದಾರೆ..

ಅರ್ಜಿ ಸಲ್ಲಿಸುವುದು ಹೇಗೆ..?

ಬಿ ಪಿ ಎಲ್ ಕಾರ್ಡ್ ಹೊಂದಿರುವವರು ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೋಗಿ ಅರ್ಜಿ ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದಾಗಿದೆ..

ಉಚಿತ ಅನಿಲ ಭಾಗ್ಯ ಯೋಜನೆಯಲ್ಲಿ ಏನೆಲ್ಲಾ ಸಿಗಲಿದೆ..?

  • 14.2 ಕೆ ಜಿ ಸಿಲಿಂಡರ್,
  •  ಗ್ಯಾಸ್ ಸ್ಟವ್, ಹಾಗೂ
  • ರೆಗ್ಯುಲೇಟರ್
  • ಎರಡು ಬಾರಿ ಉಚಿತವಾಗಿ ಸಿಲಿಂಡರ್ ಅನ್ನು ಭರ್ತಿ ಮಾಡಿಕೊಡಲಾಗುತ್ತದೆ..

‘ಉಜ್ವಲ ಯೋಜನೆ’ ಹೊದಿರುವವರು ಇದಕ್ಕೆ ಅರ್ಹರಲ್ಲ…

ಇದಕ್ಕೆ ಮೊದಲು ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ  ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್‌ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ‍ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಈ ಯೋಜನೆಯಿಂದ ಸರ್ಕಾರ ಭಾರಿಸಲಿರುವ ವೆಚ್ಚ:-

ಈ ಯೋಜನೆಯಿಂದ ಸ್ಟೌವ್, ಕನೆಕ್ಟರ್ ಹಾಗೂ ಮೊದಲ ಎರಡು ಗ್ಯಾಸ್ ಸಿಲಿಂಡರ್ ಸರ್ಕಾರದ ಕಡೆಯಿಂದ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಸರ್ಕಾರಕ್ಕೆ ಪ್ರತಿ ಸಂಪರ್ಕಕ್ಕೆ 4,040 ರೂ. ವೆಚ್ಚ ತಗಲಿದೆ ಎಂದು ಹೇಳಲಾಗಿದೆ.ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 300 ಕೋಟಿ ರೂ. ವ್ಯಯಿಸಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಈ ಯೋಜನೆಯ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.. ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗಳು ಇವೆಯೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…

  • ಉಪಯುಕ್ತ ಮಾಹಿತಿ

    ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…