ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..

ಹೌದು ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಕ್ಕೆ ಒಟ್ಟು ಎರಡು ಯೋಜನೆಗಳಿವೆ..
ಒಂದು ಕೇಂದ್ರ ಸರ್ಕಾರದ “ಪ್ರಧಾನ ಮಂತ್ರಿ ಉಜ್ವಲ ಯೋಜನೆ”
ಇನ್ನೊಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದ “ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ”
ಬಿ ಪಿ ಎಲ್ ಕಾರ್ಡ್ ಹೊಂದಿರುವವರು ಈ ಯೋಜನೆಗಳ ಮೂಲಕ ಉಚಿತ ಗ್ಯಾಸ್ ಕನೆಕ್ಷನ್ ಪಡೆಯಬಹುದಾಗಿದೆ..

ಹಾಗಾದ್ರೆ ಪ್ರಧಾನಮಂತ್ರಿ ಉಜ್ವಲ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗಳಿಂದ ಹೇಗೆ ಉಚಿತವಾಗಿ ಗ್ಯಾಸ್ ಪಡೆಯಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್ಗಳಿಗೆ ಹಣ ನೀಡಬೇಕಾಗುತ್ತದೆ.ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…



ಹತ್ತಿರದ ಗ್ಯಾಸ್ ಏಜೆನ್ಸಿ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಕೊಡಬೇಕು.. 1 ತಿಂಗಳಲ್ಲಿ ಮನವಿ ಅಂಗೀಕಾರವಾಗಿ ಗ್ಯಾಸ್ ಏಜೆನ್ಸಿಯವರು 1600 ರೂಪಾಯಿ ಮೌಲ್ಯದ ಸಿಲಿಂಡರ್ ಹಾಗೂ ರೆಗ್ಯುಲೇಟರ್ ಅನ್ನು ಉಚಿತವಾಗಿ ನೀಡುತ್ತಾರೆ.. ಉಳಿದ ಗ್ಯಾಸ್ ಉಪಕರಣಗಳು ಬೇಕಿದ್ದರೆ ಹಣವನ್ನು ನೀಡಿ ಪಡೆದುಕೊಳ್ಳಬಹುದಾಗಿದೆ..
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 2017 ರಿಂದ ರಾಜ್ಯದಲ್ಲಿ ಜಾರಿಯಲ್ಲಿದೆ.

ಮೊದಲಿಗೆ ಅನಿಲ ಭಾಗ್ಯ ಯೋಜನೆಯನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಸಿಲಿಂಡರ್ ಪಡೆದ ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ವಿತರಿಸುವುದು ಎಂದಾಗಿತ್ತು.. ಆದರೆ ಆನಂತರ ಹೆಚ್ಚಿನ ಮಂದಿಗೆ ಇದರ ಉಪಯೋಗವಾಗುವುದಿಲ್ಲ ಎಂದು ಯೋಚಿಸಿ.. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಮೂಲಕ 15 ಲಕ್ಷ ಕುಟುಂಬ ಗಳಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ಕೊಡಲು ನಿರ್ಧರಿಸಿದ್ದಾರೆ..
ಬಿ ಪಿ ಎಲ್ ಕಾರ್ಡ್ ಹೊಂದಿರುವವರು ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೋಗಿ ಅರ್ಜಿ ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದಾಗಿದೆ..

ಇದಕ್ಕೆ ಮೊದಲು ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಈ ಯೋಜನೆಯಿಂದ ಸ್ಟೌವ್, ಕನೆಕ್ಟರ್ ಹಾಗೂ ಮೊದಲ ಎರಡು ಗ್ಯಾಸ್ ಸಿಲಿಂಡರ್ ಸರ್ಕಾರದ ಕಡೆಯಿಂದ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಸರ್ಕಾರಕ್ಕೆ ಪ್ರತಿ ಸಂಪರ್ಕಕ್ಕೆ 4,040 ರೂ. ವೆಚ್ಚ ತಗಲಿದೆ ಎಂದು ಹೇಳಲಾಗಿದೆ.ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 300 ಕೋಟಿ ರೂ. ವ್ಯಯಿಸಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಈ ಯೋಜನೆಯ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.. ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…