ಸರ್ಕಾರದ ಯೋಜನೆಗಳು

ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

9275

ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಹಾಗೂ ವಸತಿ ರಹಿತ ಕುಟುಂಬಗಳಿಗೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ ಬಹುಮಹಡಿ ಕಟ್ಟಡಗಳಲ್ಲಿ ಮನೆ ನೀಡುವ ಯೋಜನೆ ಇಂದು ಅಧಿಕೃತವಾಗಿ ಜಾರಿಗೊಂಡಿತು.

ಬೆಂಗಳೂರಿನಲ್ಲಿ ಒತ್ತುವರಿ ತೆರವುಗೊಳಿಸಿ ವಶಕ್ಕೆ ತೆಗೆದುಕೊಂಡ ಸಾಕಷ್ಟು ಜಮೀನು ಇದೆ. ಅಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಒಂದೇ ಕಡೆ ನಿರ್ಮಾಣ ಆಗುತ್ತಿಲ್ಲ. ನಗರದ ಬೇರೆ ಬೇರೆ ಭಾಗಗಳಲ್ಲಿ ನಿರ್ಮಿಸಲಾಗುತ್ತದೆ. ವಾರ್ಷಿಕ ಆದಾಯ ₹ 87,600 ಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ಒಂದು ಕುಟುಂಬದಿಂದ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳದ ದೃಢೀಕರಣ ಪತ್ರಗಳ ಆರ್ಡಿ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯ. ಇನ್ನುಳಿದ ಮಾಹಿತಿಯನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ವಸತಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ 30, ಪರಿಶಿಷ್ಟ ಪಂಗಡಕ್ಕೆ ಶೇ 10, ಅಲ್ಪಸಂಖ್ಯಾತರಿಗೆ ಶೇ 10 ರಷ್ಟು ಮೀಸಲು ಇದೆ. ಉಳಿದ ಶೇ  50 ಮನೆಗಳನ್ನು ಸಾಮಾನ್ಯ ವರ್ಗಕ್ಕೆ ಹಂಚಲಾಗುತ್ತದೆ.

ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ₹ 3.50 ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ 2.70 ಲಕ್ಷ ಸಹಾಯ ಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಅರ್ಜಿ ಸಲ್ಲಿಕೆಗೆ ಬಿಬಿಎಂಪಿಯ ಎಲ್ಲ ವಾರ್ಡ್, ಕಚೇರಿಗಳಲ್ಲಿ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಇದರೊಂದಿಗೆ ಯಾವುದೇ ಬ್ರೌಸಿಂಗ್ ಸೆಂಟರ್ನ್ಲ್ಲಿಯೂ ಆನ್ಲೈಂನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 2018ರ ಜನವರಿ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ವೀಡಿಯೊ ಗ್ಯಾಲರಿ

    ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ..!ಹೇಗೆ ಆಡಿದ್ದಾರೆ ಗೊತ್ತಾ.?ಸ್ವಲ್ಪ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ…

    ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.