ಉಪಯುಕ್ತ ಮಾಹಿತಿ

ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

4689

ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.

ಅದುವೇ ಕಾರ್ ಭಾಗ್ಯ.ಇದೇನಪ್ಪಾ ಇದು ಕಾರ್ ಭಾಗ್ಯ ಅಂತೀರಾ..!

ಹೌದು,ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 3500 ಮಂದಿಗೆ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಈ ವಿಶೇಷ ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರ ಈ ಯೋಜನೆಗಾಗಿ 105 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ. ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಯೋಜನೆಯಲ್ಲಿ ಏನೆಲ್ಲಾ ಇದೆ..?

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ ಮಾಡಲಾಗುತ್ತದೆ.ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ ನೀಡಲಾಗುತ್ತದೆ.

ಸಾಲ ಸಿಗುವುದು ಮತ್ತೆ ಹಿಂದಿರುಗಿಸುವುದು ಹೇಗೆ..?

ಬ್ಯಾಂಕ್​ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್​ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಕಾರ್  ಭಾಗ್ಯ ಪಡೆಯಲು ಏನೆಲ್ಲಾ ಅರ್ಹತೆ ಇರಬೇಕು..?

  • ನಿರುದ್ಯೋಗಿಯಾಗಿರಬೇಕು.ಯಾವುದೇ ಕೆಲಸದಲ್ಲಿರಬಾರದು.
  • ಅಭ್ಯರ್ಥಿಯು ಹಳದಿ ಬ್ಯಾಡ್ಜ್ ಹೊಂದಿರಬೇಕು.
  • ಕುಟುಂಬದಲ್ಲಿ ಯಾರೊಬ್ಬರು  ಸರ್ಕಾರಿ ಕೆಲಸ ಹೊಂದಿರಬಾರದು.
  • ಬಿಪಿಎಲ್ ಕಾರ್ಡ್ ಹೊಂದಿರಬೇಕು
  • ಒಂದು ವರ್ಷಕ್ಕೆ ಆರ್ಥಿಕವಾಗಿ 12 ಸಾವಿರ ರೂ. ಮೀರಿರಬಾರದು.
  • ಅಭ್ಯರ್ಥಿ ಆಯ್ಕೆ ಹೇಗೆ ನಡೆಯುತ್ತೆ..?
  • ನಿಮ್ಮ ನಿಮ್ಮ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ನಿಮ್ಮ ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.

ಫಲಾನುಭವಿಯು ಈ  ಕಾರಗಳನ್ನು ಮಾತ್ರ ಕೊಳ್ಳಬಹುದು..

ಫಲಾನುಭವಿಯು 6 ರಿಂದ 8 ಲಕ್ಷ ರೂ. ಬೆಲೆಬಾಳುವ ಕಾರುಗಳನ್ನು ಕೊಳ್ಳಬಹುದು.ಫಲಾನುಭವಿಯು ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್‌ ಕಾರುಗಳನ್ನೇ ಕೊಳ್ಳಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…