ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ, ಬಯೋಮೆಟ್ರಿಕ್ ಪದ್ಧತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ ಎಂದರು. ಸಾರ್ವಜನಿಕರು ಪಡಿತರ ಚೀಟಿಯನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ಪೀಡ್ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು. ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಬದಲಾಗಿ ಆದ್ಯತಾ ಮತ್ತು ಆದ್ಯತಾ ರಹಿತ ಕುಟುಂಬಗಳೆಂದು ಗುರ್ತಿಸಲಾಗಿದ್ದು, 1.20 ಲಕ್ಷ ರೂ. ಆದಾಯ ಮಿತಿ ಹೊಂದಿರು ವವರನ್ನು ಆದ್ಯತಾ ಕುಟುಂಬವೆಂದು, ಉಳಿದಂತೆ ಆದ್ಯತಾ ರಹಿತ ಕುಟುಂಬ ಎಂದು ಗುರುತಿಸಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಲ್ಲಿಯೂ ಬಯೋಮೆಟ್ರಿಕ್ ಅಳವಡಿಸಲಾಗುತ್ತಿದೆ. ಇದರಿಂದ ಗೋದಾ ಮುನಿಂದ ನ್ಯಾಯಬೆಲೆ ಅಂಗಡಿಗಳಿಗೆ ಎಷ್ಟು ಆಹಾರ ಪೂರೈಕೆಯಾಗಿದೆ. ನ್ಯಾಯಬೆಲೆ ಅಂಗಡಿಗಳಿಂದ ಎಷ್ಟರ ಮಟ್ಟಿಗೆ ಆಹಾರ ವಿತರಣೆಯಾಗಿದೆ ಎಂಬ ಮಾಹಿತಿ ದೊರೆಯಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಹತ್ತೂವರೆ ಲಕ್ಷ ಬೋಗಸ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ನಕಲಿ ಕಾರ್ಡ್ಗಳಿಗೆ
ಅವಕಾಶವಿರುವುದಿಲ್ಲ ಎಂದರು. ಆದರೂ ಬೋಗಸ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಅಂತವರಿಗೆ 4೦೦ ರೂ., ಹಾಗೆಯೇ ಕಾಳಸಂತೆ ಆಹಾರ ಪತ್ತೆ ಹಚ್ಚುವವರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವರು ನುಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೌಲಭ್ಯಗಳು ಆದ್ಯತಾ ಹಾಗೂ ಆದ್ಯತಾ ರಹಿತ ಕುಟುಂಬಗಳಿಗೆ ತಲುಪಬೇಕು ಎಂದರು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳಲಾಗುವುದು.ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿದರೆ ಒಂದು ವಾರದಲ್ಲಿ ಪಡಿತರ ಚೀಟಿ ನೀಡಬೇಕು. ಈಗಾಗಲೇ ಈ ಪ್ರಕ್ರಿಯೆಯು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಆರಂಭಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲಾ ಪಡಿತರ ಚೀಟಿಗೆ ಆಧಾರ್ ಜೋಡಣಾ ಕಾರ್ಯವು ನಡೆದಿದೆ. ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು. ಹಾಗೆಯೇ ಸಿರಿಧಾನ್ಯ ಬೆಳೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ರಾಗಿ ಮತ್ತು ಜೋಳ ಖರೀದಿ ಮಾಡಲಾಗುತ್ತಿದೆ. ಬೇಡಿಕೆ ಇರುವ ಕಡೆ ರಾಗಿ ಮತ್ತು ಜೋಳವನ್ನು ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಅವರ ಅನಿಲಭಾಗ್ಯ ಯೋಜನೆಯಡಿ ಫಲಾನುಭವಿಗಳ ಪಟ್ಟಿ ಪಡೆಯ ಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕಾರ್ಮಿಕರಿಗೆ ಈ ಸೌಲಭ್ಯ
ನೀಡಲಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.