ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ, ಬಯೋಮೆಟ್ರಿಕ್ ಪದ್ಧತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ ಎಂದರು. ಸಾರ್ವಜನಿಕರು ಪಡಿತರ ಚೀಟಿಯನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ಪೀಡ್ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು. ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಬದಲಾಗಿ ಆದ್ಯತಾ ಮತ್ತು ಆದ್ಯತಾ ರಹಿತ ಕುಟುಂಬಗಳೆಂದು ಗುರ್ತಿಸಲಾಗಿದ್ದು, 1.20 ಲಕ್ಷ ರೂ. ಆದಾಯ ಮಿತಿ ಹೊಂದಿರು ವವರನ್ನು ಆದ್ಯತಾ ಕುಟುಂಬವೆಂದು, ಉಳಿದಂತೆ ಆದ್ಯತಾ ರಹಿತ ಕುಟುಂಬ ಎಂದು ಗುರುತಿಸಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಲ್ಲಿಯೂ ಬಯೋಮೆಟ್ರಿಕ್ ಅಳವಡಿಸಲಾಗುತ್ತಿದೆ. ಇದರಿಂದ ಗೋದಾ ಮುನಿಂದ ನ್ಯಾಯಬೆಲೆ ಅಂಗಡಿಗಳಿಗೆ ಎಷ್ಟು ಆಹಾರ ಪೂರೈಕೆಯಾಗಿದೆ. ನ್ಯಾಯಬೆಲೆ ಅಂಗಡಿಗಳಿಂದ ಎಷ್ಟರ ಮಟ್ಟಿಗೆ ಆಹಾರ ವಿತರಣೆಯಾಗಿದೆ ಎಂಬ ಮಾಹಿತಿ ದೊರೆಯಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಹತ್ತೂವರೆ ಲಕ್ಷ ಬೋಗಸ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ನಕಲಿ ಕಾರ್ಡ್ಗಳಿಗೆ
ಅವಕಾಶವಿರುವುದಿಲ್ಲ ಎಂದರು. ಆದರೂ ಬೋಗಸ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಅಂತವರಿಗೆ 4೦೦ ರೂ., ಹಾಗೆಯೇ ಕಾಳಸಂತೆ ಆಹಾರ ಪತ್ತೆ ಹಚ್ಚುವವರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವರು ನುಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೌಲಭ್ಯಗಳು ಆದ್ಯತಾ ಹಾಗೂ ಆದ್ಯತಾ ರಹಿತ ಕುಟುಂಬಗಳಿಗೆ ತಲುಪಬೇಕು ಎಂದರು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳಲಾಗುವುದು.ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿದರೆ ಒಂದು ವಾರದಲ್ಲಿ ಪಡಿತರ ಚೀಟಿ ನೀಡಬೇಕು. ಈಗಾಗಲೇ ಈ ಪ್ರಕ್ರಿಯೆಯು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಆರಂಭಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲಾ ಪಡಿತರ ಚೀಟಿಗೆ ಆಧಾರ್ ಜೋಡಣಾ ಕಾರ್ಯವು ನಡೆದಿದೆ. ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು. ಹಾಗೆಯೇ ಸಿರಿಧಾನ್ಯ ಬೆಳೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ರಾಗಿ ಮತ್ತು ಜೋಳ ಖರೀದಿ ಮಾಡಲಾಗುತ್ತಿದೆ. ಬೇಡಿಕೆ ಇರುವ ಕಡೆ ರಾಗಿ ಮತ್ತು ಜೋಳವನ್ನು ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಅವರ ಅನಿಲಭಾಗ್ಯ ಯೋಜನೆಯಡಿ ಫಲಾನುಭವಿಗಳ ಪಟ್ಟಿ ಪಡೆಯ ಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕಾರ್ಮಿಕರಿಗೆ ಈ ಸೌಲಭ್ಯ
ನೀಡಲಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…