ಆರೋಗ್ಯ

‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

969

ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-

ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.

ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-

ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.

ಬೀಟ್ರೂಟ್ ಜ್ಯೂಸ್:-

ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ

ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-

ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.

ಬೀಟ್‍ರೂಟ್ ಫ್ರೈ:-

ಬೀಟ್‍ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್‍ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ

ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-

ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್‌ರೂಟ್‌ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….