News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆರೋಗ್ಯ

‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

971

ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-

ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.

ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-

ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.

ಬೀಟ್ರೂಟ್ ಜ್ಯೂಸ್:-

ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ

ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-

ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.

ಬೀಟ್‍ರೂಟ್ ಫ್ರೈ:-

ಬೀಟ್‍ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್‍ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ

ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-

ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್‌ರೂಟ್‌ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

    ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…