News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

976

ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-

ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.

ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-

ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.

ಬೀಟ್ರೂಟ್ ಜ್ಯೂಸ್:-

ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ

ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-

ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.

ಬೀಟ್‍ರೂಟ್ ಫ್ರೈ:-

ಬೀಟ್‍ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್‍ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ

ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-

ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್‌ರೂಟ್‌ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…