News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

975

ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-

ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.

ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-

ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.

ಬೀಟ್ರೂಟ್ ಜ್ಯೂಸ್:-

ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ

ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-

ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.

ಬೀಟ್‍ರೂಟ್ ಫ್ರೈ:-

ಬೀಟ್‍ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್‍ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ

ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-

ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್‌ರೂಟ್‌ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ, ಜೀವನಶೈಲಿ

    ನಿಂತ್ಕೊಂಡು ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ??? ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…