ರಾಜಕೀಯ

ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

1886

ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ  ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

 

24 ಅಂಶಗಳಿರುವ ಈ ಪ್ರಣಾಳಿಕೆಯಲ್ಲಿ ಸಂಪೂರ್ಣ ಪಾರದರ್ಶಕ ಆಡಳಿತ ನೀಡುವ ಬಗ್ಗೆ ಆಶ್ವಾಸನೆ ನೀಡಲಾಗಿದೆ. ಈ ಪ್ರಣಾಳಿಕೆಯನ್ನು ಸಂಪೂರ್ಣವಾಗಿ ಓದಿದ್ರೆ, ನಿಮಗೆ ಅನ್ನಿಸಬಹುದು ಇದು ಯಾವುದೋ ಫಿಲ್ಮಗೆ ಬರೆದ ಸ್ಕ್ರಿಪ್ಟ್ ನಂತೆ ಇದೆಯಲ್ಲಾ ಎಂದು. ಯಾಕೆಂದ್ರೆ ಈ ರೀತಿ ಅಂಶಗಳನ್ನು ನಾವು ಚಲನಚಿತ್ರಗಳಲ್ಲಿ ಮಾತ್ರ ನೋಡಲಿಕ್ಕೆ ಸಾದ್ಯ.ಉಪೇಂದ್ರರವರು ಗೆದ್ದು ಈ ಪ್ರನಾಳಿಕೆಯಲ್ಲಿರುವಂತೆ ಆಡಳಿತ ಮಾಡಿದ್ದೇ ಆದಲ್ಲಿ ನಮ್ಮ ರಾಜ್ಯ 2020ಗೆ “ಸೂಪರ್ ರಾಜ್ಯ” ಆಗೋದ್ರಲ್ಲಿ ಡವ್’ಟೆ ಬೇಡ…

 

ಇಲ್ಲಿವೆ ನೋಡಿ ಈ ಪ್ರಣಾಳಿಕೆಯಲ್ಲಿರುವ 24 ಅಂಶಗಳು:-

  • ಪ್ರಜೆಗಳನ್ನು ಸೇರಿಸಿಕೊಂಡು ಸಂಪೂರ್ಣ ಪಾರದರ್ಶಕ ಆಡಳಿತ ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ.
  • ಪ್ರಜೆಗಳ ನೇರ ಸಂಪರ್ಕಕ್ಕಾಗಿ ಟಿವಿ, ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್, ಯುಟ್ಯೂಬ್ ಚಾನಲ್)ಮತ್ತು ಮೊಬೈಲ್ ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಲಾಗುವುದು.
  • ಪ್ರಜೆಗಳು ಮೊಬೈಲ್ ಅಪ್ಲಿಕೇಶನ್‍ ಮೂಲಕ ತಮ್ಮ ಕ್ಷೇತ್ರ, ಗ್ರಾಮ, ನಗರಗಳ ಸಮಸ್ಯಗಳ ಕುರಿತು ಚಿತ್ರಗಳು, ವಿಡಿಯೋ, ಲಿಖಿತ ಪತ್ರ, ಮತ್ತು ಆಡಿಯೋ ಮಾಡಿ ಆ ಕ್ಷೇತ್ರಗಳಿಗೆ ಸಂಭಂದಪಟ್ಟ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ದೂರುಗಳನ್ನು ಸಲ್ಲಿಸಬಹುದು, ಇದಕ್ಕೆ ನಿರ್ಧಿಷ್ಟ ಕಾಲಾವಧಿಯೊಳಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಈ ದೂರು ಮೇಲ್ಮಟ್ಟದ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಯವರೆಗೂ ವರ್ಗಾವಣೆಯಾಗುತ್ತದೆ.
  • ಸರಿಯಾದ ಸಮಯಕ್ಕೆ ಜನಗಳಿಗೆ ಸ್ಪಂದಿಸಿ ಅವರ ಸಮಸ್ಯಗಳನ್ನು ಪರಿಹರಿಸಿದಂತ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಂಕಗಳನ್ನು ನೀಡಲಾಗುವುದು. ಈ ಅಂಕಗಳೇ ಅವರ ಮುಂದಿನ ಚುನಾವಣೆಗೆ ಮತ್ತು ಅಧಿಕಾರಿಗಳ ಬಡ್ತಿಗೆ ಮಾನದಂಡವಾಗಲಿದೆ.
  • ಕಡಿಮೆ ಅಂಕಗಳಿಸಿದವರಿಗೆ ಶಿಸ್ತುಕ್ರಮ ಮತ್ತು ವೇತನ ಕಡಿತ ಮಾಡಲಾಗುವುದು.
  • ಪ್ರತಿ ಇಲಾಖೆಯ ನೌಕರರನ್ನು ಗುರುತಿಗೆ, ಆಯಾ ಇಲಾಖೆಗಳಿಗೆ ಸಂಬಂದಿಸಿದಂತೆ  ಸಮವಸ್ತ್ರ ಮತ್ತು ಇಲಾಖೆಯ ಬ್ಯಾಡ್ಜ್’ಗಳನ್ನು ಧರಿಸಬೇಕಾಗುತ್ತದೆ. ಪ್ರಜೆಗಳು ಇಲಾಖೆಗಳ ನೌಕರರನ್ನು ಗುರುತಿಸಲು ಇದು ಸಹಾಯವಾಗುತ್ತದೆ.
  • ಎಲ್ಲಾ ಸರ್ಕಾರಿ ಕಛೇರಿಗಳು ಹಾಗೂ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ (ರಿಜಿಸ್ಟರ್), ವೈಫೈ, ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಆಳವಡಿಸಲಾಗುತ್ತದೆ.
  • ವಿಧಾನಸೌಧದ ಕಾರ್ಯ ಚಟುವಟಿಕೆ ಪರದೆ ಮೇಲೆ ಪ್ರಸಾರ ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಕಾರ್ಯ ಚಟುವಟಿಕೆ, ಯೋಜನೆಗಳು, ಕಾಮಗಾರಿಗಳು, ಚರ್ಚೆಗಳು ದೃಶ್ಯ ಮಾಧ್ಯಮಗಳ ಸಾಕ್ಷಿ & ದಾಖಲೆಗಳೊಂದಿಗೆ ದೊಡ್ಡ ಪರದೆಯ ಮೇಲೆ ಬಿತ್ತರಿಸಿ ಅದರ ಆಧಾರದ ಮೇಲೆಯೇ ಚರ್ಚೆ ನಡೆಸಬೇಕು.
  • ಮಾಧ್ಯಮಗಳಲ್ಲಿ ಎಲ್ಲ ಜನಪ್ರತಿನಿಧಿಗಳು ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ-ಪುರಾವೆಗಳೊಂದಿಗೆ ದೃಶ್ಯ ಮಾಧ್ಯಮಗಳ ಮುಖಾಂತರ ನೇರಪ್ರಸಾರದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಈ ಪ್ರಕ್ರಿಯೆಗಳನ್ನು ಪ್ರಜೆಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸುವಂತೆ ಮಾಡಲಾಗುವುದು ಇದೆ ಸಮಯದಲ್ಲಿ ಪ್ರಜೆಗಳು ಸಹ ನೇರ ಚರ್ಚೆಯೊಂದಿಗೆ ಭಾಗವಹಿಸಿ ತಮ್ಮ ಸಮಸ್ಯಗಳನ್ನು ಬಗೆಹರಿಸಕೊಲ್ಲಬಹುದು.
  • ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಅದರ ಪ್ರತಿಯೊಂದು ಟೆಂಡರ್ ಪ್ರಕ್ರಿಯೆಗಳ ಭಾಗವಹಿಸುವಿಕೆಯು ಸಂಪೂರ್ಣವಾಗಿ ಆನ್ ಲೈನ್ ಮೂಲಕ ಮತ್ತು ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಪಾರದರ್ಶಕವಾಗಿ ಪ್ರಸಾರ ಮಾಡಲಾಗುವುದು.
  • ಗುತ್ತಿಗೆದಾರರಿಗೆ ಕೊಡಲಾಗುವ ಯೋಜನೆಗಳ ಖರ್ಚು- ವೆಚ್ಚಗಳನ್ನು ಅಧಿಕೃತ ದೃಶ್ಯ ದಾಖಲೆಗಳ(ಬಿಲ್) ಮತ್ತು ಹಾಜರಾತಿ ವಿವರಣೆಗಳ ಆಧಾರದ ಮೇಲೆಯೇ ಕೊಡಲಾಗುವುದು. ಕಾರ್ಮಿಕರ ಹಾಜರಾತಿ ದಾಖಲೆಗಳನ್ನು ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಬಹಿರಂಗಪಡಿಸತಕ್ಕದ್ದು.
  • ಪ್ರತಿ ಕಾಮಗಾರಿಯ ಪ್ರತಿ ಹಂತವೂ ಬೆಳವಣಿಗೆಗಳ ದಾಖಲೆಗಳೊಂದಿಗೆ ಪ್ರತಿ ಹಂತಗಳ ನೇರ ಪ್ರಸಾರವನ್ನು ಪಾರದರ್ಶಕವಾಗಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ನೋಡಲು ಅವಕಾಶವಿರುತ್ತದೆ.
  • ಜನಪ್ರತಿನಿಧಿ, ನೌಕರರ ಕಾರ್ಯ ಟಿವಿಯಲ್ಲಿ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.
  • ತಿಂಗಳಿಗೊಮ್ಮೆ ಪ್ರಜೆಗಳು, ಜನಪ್ರತಿನಿಧಿ, ನೌಕರರ ಸಂವಾದಗಳು ಅವರವರ ಕ್ಷೇತ್ರಗಳಲ್ಲಿ ಟಿವಿ ಚಾನಲ್‍ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ದೃಶ್ಯ ದಾಖಲೆಗಳೊಂದಿಗೆ ಪ್ರಸಾರಗೊಳ್ಳುತ್ತವೆ.
  • ಸಿಎಂ, ಸಚಿವರಿಂದ ಆಗಾಗ ಪರಿಶೀಲನೆ ಮತ್ತು ಪ್ರಜೆಗಳಿಗೆ ನೇರ ಪ್ರಸಾರದ ವ್ಯವಸ್ಥೆ ಇರುತ್ತದೆ.
  • ಆಡಳಿತ ಸರ್ಕಾರವು ಯಾವುದೇ ಸರ್ಕಾರೀ ವರ್ಗಾವಣೆಗಳನ್ನು ಮಾಡುವಾಗ ಸರಿಯಾದ ಕಾರಣ, ದಾಖಲೆಗಳು ಮತ್ತು ಸಾಕ್ಷಿಗಳನ್ನು ಕೊಟ್ಟು ನೇರ ಪ್ರಸಾರದೊಂದಿಗೆ ವರ್ಗಾವಣೆಗಳನ್ನು ಮಾಡಬೇಕು.
  • ಎಲ್ಲಾ ಸರ್ಕಾರೀ ಇಲಾಖೆಗಳ ಸಂದರ್ಶನಗಳು ಹಾಗೂ ಆಯ್ಕೆಗಳ ಪ್ರಕ್ರಿಯೆಗಳು ದೃಶ್ಯ ಮಾಧ್ಯಮದಲ್ಲಿ ನೇರ ಪ್ರಸಾರ ಮಾಡಲಾಗುವುದು.
  • ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ, ಆದಾಯ ದಾಖಲೆ ಮಾಹಿತಿಗಳನ್ನು ಸಾರ್ವಜನಿಕರಿಗೆ ತೆರೆದಿಡಲಾಗುವುದು.
  • ಮಾಹಿತಿ ಕೊಟ್ಟರೆ ಮಾತ್ರ ಚುನಾಯಿತ ಜನಪ್ರತಿನಿಧಿಗೆ ವೇತನಗಳು, ಸೌಲಭ್ಯಗಳು ದೊರೆಯುತ್ತದೆ.
  • ಪ್ರಜೆಗಳು ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡುವಂತೆ, ಮಾಜಿ ಜನಪ್ರತಿನಿಧಿ, ನೌಕರರು ಪಿಂಚಣಿಗಳನ್ನು ಬಿಡಬಹುದು.
  • ಸ್ವಯಂಪ್ರೇರಿತರಾಗಿ ಬಿಟ್ಟುಕೊಟ್ಟ ಪಿಂಚಣಿ ಹಣದಿಂದ, ವೃದ್ಧಾಶ್ರಮ, ವಸತಿರಹಿತರ ಅಭಿವೃಧ್ಧಿ ಮಾಡಲಾಗುವುದು.
  • ಎಲ್ಲಾ ಸರ್ಕಾರಿ ಯೋಜನೆಗಳು ಸಂಪೂರ್ಣಗೊಂಡು ಸಂಬಂಧಪಟ್ಟ ಅಧಿಕಾರಿಗಳ ಪರೀಕ್ಷೆ-ಅನುಮತಿ ನಂತರ ಸಾರ್ವಜನಿಕರ ಬಳಕೆಗೆ ನೇರವಾಗಿ ತೆರೆದಿಡಲಾಗುವುದು. ಯಾವುದೇ ರೀತಿಯ ಲೋಕಾರ್ಪಣಾ ಸಮಾರಂಭ, ಸಂಭ್ರಮ, ಉದ್ಗಾಟನೆಗಳನ್ನು ನಡೆಸುವುದು ಹಾಗೂ ಜನಪ್ರತಿನಿಧಿಗಳು/ ಅಧಿಕಾರಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ.
  • ಶಾಸಕಾಂಗ ವೇತನ, ಪಿಂಚಣಿ & ಭತ್ಯೆ ಕಾಯ್ದೆ 1952ರ ಕಾನೂನು ತಿದ್ದುಪಡಿ ಮಾಡಲಾಗುವುದು.
  • ಮೇಲ್ಕಂಡ ಪ್ರಣಾಳಿಕೆ ಅಂಶಗಳನ್ನು ಜಾರಿಗೆ ತರಲು ಅಗತ್ಯ ಕಾನೂನು ಜಾರಿ ಮಾಡಲಾಗುವುದು.

ಇಲ್ಲಿ ಓದಿ:-ಆಟೋ ಚಾಲಕನಿಂದ ಬುದ್ದಿವಂತನಿಗೆ ಬಂದ ಆ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ನೀವೂ ಸಲಹೆ ನೀಡಬಹುದು:-

ಇದು ಮೊದಲನೆ ಭಾಗವಾಗಿದ್ದು, ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉಪೇಂದ್ರರವರು ಹೇಳಿದ್ದಾರೆ.

ಪ್ರಣಾಳಿಕೆಗೆ ಸಲಹೆ ಮತ್ತು ಅಭಿಪ್ರಾಯ ನೀಡಲು ಮೊಬೈಲ್‌- 9845396204, 9845396804 ಮತ್ತು ideaskpjpuppi@ gmail.com

 

 

 

 

 

 

 

 

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…