ರಾಜಕೀಯ

ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

1882

ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ  ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

 

24 ಅಂಶಗಳಿರುವ ಈ ಪ್ರಣಾಳಿಕೆಯಲ್ಲಿ ಸಂಪೂರ್ಣ ಪಾರದರ್ಶಕ ಆಡಳಿತ ನೀಡುವ ಬಗ್ಗೆ ಆಶ್ವಾಸನೆ ನೀಡಲಾಗಿದೆ. ಈ ಪ್ರಣಾಳಿಕೆಯನ್ನು ಸಂಪೂರ್ಣವಾಗಿ ಓದಿದ್ರೆ, ನಿಮಗೆ ಅನ್ನಿಸಬಹುದು ಇದು ಯಾವುದೋ ಫಿಲ್ಮಗೆ ಬರೆದ ಸ್ಕ್ರಿಪ್ಟ್ ನಂತೆ ಇದೆಯಲ್ಲಾ ಎಂದು. ಯಾಕೆಂದ್ರೆ ಈ ರೀತಿ ಅಂಶಗಳನ್ನು ನಾವು ಚಲನಚಿತ್ರಗಳಲ್ಲಿ ಮಾತ್ರ ನೋಡಲಿಕ್ಕೆ ಸಾದ್ಯ.ಉಪೇಂದ್ರರವರು ಗೆದ್ದು ಈ ಪ್ರನಾಳಿಕೆಯಲ್ಲಿರುವಂತೆ ಆಡಳಿತ ಮಾಡಿದ್ದೇ ಆದಲ್ಲಿ ನಮ್ಮ ರಾಜ್ಯ 2020ಗೆ “ಸೂಪರ್ ರಾಜ್ಯ” ಆಗೋದ್ರಲ್ಲಿ ಡವ್’ಟೆ ಬೇಡ…

 

ಇಲ್ಲಿವೆ ನೋಡಿ ಈ ಪ್ರಣಾಳಿಕೆಯಲ್ಲಿರುವ 24 ಅಂಶಗಳು:-

  • ಪ್ರಜೆಗಳನ್ನು ಸೇರಿಸಿಕೊಂಡು ಸಂಪೂರ್ಣ ಪಾರದರ್ಶಕ ಆಡಳಿತ ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ.
  • ಪ್ರಜೆಗಳ ನೇರ ಸಂಪರ್ಕಕ್ಕಾಗಿ ಟಿವಿ, ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್, ಯುಟ್ಯೂಬ್ ಚಾನಲ್)ಮತ್ತು ಮೊಬೈಲ್ ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಲಾಗುವುದು.
  • ಪ್ರಜೆಗಳು ಮೊಬೈಲ್ ಅಪ್ಲಿಕೇಶನ್‍ ಮೂಲಕ ತಮ್ಮ ಕ್ಷೇತ್ರ, ಗ್ರಾಮ, ನಗರಗಳ ಸಮಸ್ಯಗಳ ಕುರಿತು ಚಿತ್ರಗಳು, ವಿಡಿಯೋ, ಲಿಖಿತ ಪತ್ರ, ಮತ್ತು ಆಡಿಯೋ ಮಾಡಿ ಆ ಕ್ಷೇತ್ರಗಳಿಗೆ ಸಂಭಂದಪಟ್ಟ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ದೂರುಗಳನ್ನು ಸಲ್ಲಿಸಬಹುದು, ಇದಕ್ಕೆ ನಿರ್ಧಿಷ್ಟ ಕಾಲಾವಧಿಯೊಳಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಈ ದೂರು ಮೇಲ್ಮಟ್ಟದ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಯವರೆಗೂ ವರ್ಗಾವಣೆಯಾಗುತ್ತದೆ.
  • ಸರಿಯಾದ ಸಮಯಕ್ಕೆ ಜನಗಳಿಗೆ ಸ್ಪಂದಿಸಿ ಅವರ ಸಮಸ್ಯಗಳನ್ನು ಪರಿಹರಿಸಿದಂತ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಂಕಗಳನ್ನು ನೀಡಲಾಗುವುದು. ಈ ಅಂಕಗಳೇ ಅವರ ಮುಂದಿನ ಚುನಾವಣೆಗೆ ಮತ್ತು ಅಧಿಕಾರಿಗಳ ಬಡ್ತಿಗೆ ಮಾನದಂಡವಾಗಲಿದೆ.
  • ಕಡಿಮೆ ಅಂಕಗಳಿಸಿದವರಿಗೆ ಶಿಸ್ತುಕ್ರಮ ಮತ್ತು ವೇತನ ಕಡಿತ ಮಾಡಲಾಗುವುದು.
  • ಪ್ರತಿ ಇಲಾಖೆಯ ನೌಕರರನ್ನು ಗುರುತಿಗೆ, ಆಯಾ ಇಲಾಖೆಗಳಿಗೆ ಸಂಬಂದಿಸಿದಂತೆ  ಸಮವಸ್ತ್ರ ಮತ್ತು ಇಲಾಖೆಯ ಬ್ಯಾಡ್ಜ್’ಗಳನ್ನು ಧರಿಸಬೇಕಾಗುತ್ತದೆ. ಪ್ರಜೆಗಳು ಇಲಾಖೆಗಳ ನೌಕರರನ್ನು ಗುರುತಿಸಲು ಇದು ಸಹಾಯವಾಗುತ್ತದೆ.
  • ಎಲ್ಲಾ ಸರ್ಕಾರಿ ಕಛೇರಿಗಳು ಹಾಗೂ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ (ರಿಜಿಸ್ಟರ್), ವೈಫೈ, ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಆಳವಡಿಸಲಾಗುತ್ತದೆ.
  • ವಿಧಾನಸೌಧದ ಕಾರ್ಯ ಚಟುವಟಿಕೆ ಪರದೆ ಮೇಲೆ ಪ್ರಸಾರ ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಕಾರ್ಯ ಚಟುವಟಿಕೆ, ಯೋಜನೆಗಳು, ಕಾಮಗಾರಿಗಳು, ಚರ್ಚೆಗಳು ದೃಶ್ಯ ಮಾಧ್ಯಮಗಳ ಸಾಕ್ಷಿ & ದಾಖಲೆಗಳೊಂದಿಗೆ ದೊಡ್ಡ ಪರದೆಯ ಮೇಲೆ ಬಿತ್ತರಿಸಿ ಅದರ ಆಧಾರದ ಮೇಲೆಯೇ ಚರ್ಚೆ ನಡೆಸಬೇಕು.
  • ಮಾಧ್ಯಮಗಳಲ್ಲಿ ಎಲ್ಲ ಜನಪ್ರತಿನಿಧಿಗಳು ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ-ಪುರಾವೆಗಳೊಂದಿಗೆ ದೃಶ್ಯ ಮಾಧ್ಯಮಗಳ ಮುಖಾಂತರ ನೇರಪ್ರಸಾರದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಈ ಪ್ರಕ್ರಿಯೆಗಳನ್ನು ಪ್ರಜೆಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸುವಂತೆ ಮಾಡಲಾಗುವುದು ಇದೆ ಸಮಯದಲ್ಲಿ ಪ್ರಜೆಗಳು ಸಹ ನೇರ ಚರ್ಚೆಯೊಂದಿಗೆ ಭಾಗವಹಿಸಿ ತಮ್ಮ ಸಮಸ್ಯಗಳನ್ನು ಬಗೆಹರಿಸಕೊಲ್ಲಬಹುದು.
  • ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಅದರ ಪ್ರತಿಯೊಂದು ಟೆಂಡರ್ ಪ್ರಕ್ರಿಯೆಗಳ ಭಾಗವಹಿಸುವಿಕೆಯು ಸಂಪೂರ್ಣವಾಗಿ ಆನ್ ಲೈನ್ ಮೂಲಕ ಮತ್ತು ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಪಾರದರ್ಶಕವಾಗಿ ಪ್ರಸಾರ ಮಾಡಲಾಗುವುದು.
  • ಗುತ್ತಿಗೆದಾರರಿಗೆ ಕೊಡಲಾಗುವ ಯೋಜನೆಗಳ ಖರ್ಚು- ವೆಚ್ಚಗಳನ್ನು ಅಧಿಕೃತ ದೃಶ್ಯ ದಾಖಲೆಗಳ(ಬಿಲ್) ಮತ್ತು ಹಾಜರಾತಿ ವಿವರಣೆಗಳ ಆಧಾರದ ಮೇಲೆಯೇ ಕೊಡಲಾಗುವುದು. ಕಾರ್ಮಿಕರ ಹಾಜರಾತಿ ದಾಖಲೆಗಳನ್ನು ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಬಹಿರಂಗಪಡಿಸತಕ್ಕದ್ದು.
  • ಪ್ರತಿ ಕಾಮಗಾರಿಯ ಪ್ರತಿ ಹಂತವೂ ಬೆಳವಣಿಗೆಗಳ ದಾಖಲೆಗಳೊಂದಿಗೆ ಪ್ರತಿ ಹಂತಗಳ ನೇರ ಪ್ರಸಾರವನ್ನು ಪಾರದರ್ಶಕವಾಗಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ನೋಡಲು ಅವಕಾಶವಿರುತ್ತದೆ.
  • ಜನಪ್ರತಿನಿಧಿ, ನೌಕರರ ಕಾರ್ಯ ಟಿವಿಯಲ್ಲಿ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.
  • ತಿಂಗಳಿಗೊಮ್ಮೆ ಪ್ರಜೆಗಳು, ಜನಪ್ರತಿನಿಧಿ, ನೌಕರರ ಸಂವಾದಗಳು ಅವರವರ ಕ್ಷೇತ್ರಗಳಲ್ಲಿ ಟಿವಿ ಚಾನಲ್‍ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ದೃಶ್ಯ ದಾಖಲೆಗಳೊಂದಿಗೆ ಪ್ರಸಾರಗೊಳ್ಳುತ್ತವೆ.
  • ಸಿಎಂ, ಸಚಿವರಿಂದ ಆಗಾಗ ಪರಿಶೀಲನೆ ಮತ್ತು ಪ್ರಜೆಗಳಿಗೆ ನೇರ ಪ್ರಸಾರದ ವ್ಯವಸ್ಥೆ ಇರುತ್ತದೆ.
  • ಆಡಳಿತ ಸರ್ಕಾರವು ಯಾವುದೇ ಸರ್ಕಾರೀ ವರ್ಗಾವಣೆಗಳನ್ನು ಮಾಡುವಾಗ ಸರಿಯಾದ ಕಾರಣ, ದಾಖಲೆಗಳು ಮತ್ತು ಸಾಕ್ಷಿಗಳನ್ನು ಕೊಟ್ಟು ನೇರ ಪ್ರಸಾರದೊಂದಿಗೆ ವರ್ಗಾವಣೆಗಳನ್ನು ಮಾಡಬೇಕು.
  • ಎಲ್ಲಾ ಸರ್ಕಾರೀ ಇಲಾಖೆಗಳ ಸಂದರ್ಶನಗಳು ಹಾಗೂ ಆಯ್ಕೆಗಳ ಪ್ರಕ್ರಿಯೆಗಳು ದೃಶ್ಯ ಮಾಧ್ಯಮದಲ್ಲಿ ನೇರ ಪ್ರಸಾರ ಮಾಡಲಾಗುವುದು.
  • ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ, ಆದಾಯ ದಾಖಲೆ ಮಾಹಿತಿಗಳನ್ನು ಸಾರ್ವಜನಿಕರಿಗೆ ತೆರೆದಿಡಲಾಗುವುದು.
  • ಮಾಹಿತಿ ಕೊಟ್ಟರೆ ಮಾತ್ರ ಚುನಾಯಿತ ಜನಪ್ರತಿನಿಧಿಗೆ ವೇತನಗಳು, ಸೌಲಭ್ಯಗಳು ದೊರೆಯುತ್ತದೆ.
  • ಪ್ರಜೆಗಳು ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡುವಂತೆ, ಮಾಜಿ ಜನಪ್ರತಿನಿಧಿ, ನೌಕರರು ಪಿಂಚಣಿಗಳನ್ನು ಬಿಡಬಹುದು.
  • ಸ್ವಯಂಪ್ರೇರಿತರಾಗಿ ಬಿಟ್ಟುಕೊಟ್ಟ ಪಿಂಚಣಿ ಹಣದಿಂದ, ವೃದ್ಧಾಶ್ರಮ, ವಸತಿರಹಿತರ ಅಭಿವೃಧ್ಧಿ ಮಾಡಲಾಗುವುದು.
  • ಎಲ್ಲಾ ಸರ್ಕಾರಿ ಯೋಜನೆಗಳು ಸಂಪೂರ್ಣಗೊಂಡು ಸಂಬಂಧಪಟ್ಟ ಅಧಿಕಾರಿಗಳ ಪರೀಕ್ಷೆ-ಅನುಮತಿ ನಂತರ ಸಾರ್ವಜನಿಕರ ಬಳಕೆಗೆ ನೇರವಾಗಿ ತೆರೆದಿಡಲಾಗುವುದು. ಯಾವುದೇ ರೀತಿಯ ಲೋಕಾರ್ಪಣಾ ಸಮಾರಂಭ, ಸಂಭ್ರಮ, ಉದ್ಗಾಟನೆಗಳನ್ನು ನಡೆಸುವುದು ಹಾಗೂ ಜನಪ್ರತಿನಿಧಿಗಳು/ ಅಧಿಕಾರಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ.
  • ಶಾಸಕಾಂಗ ವೇತನ, ಪಿಂಚಣಿ & ಭತ್ಯೆ ಕಾಯ್ದೆ 1952ರ ಕಾನೂನು ತಿದ್ದುಪಡಿ ಮಾಡಲಾಗುವುದು.
  • ಮೇಲ್ಕಂಡ ಪ್ರಣಾಳಿಕೆ ಅಂಶಗಳನ್ನು ಜಾರಿಗೆ ತರಲು ಅಗತ್ಯ ಕಾನೂನು ಜಾರಿ ಮಾಡಲಾಗುವುದು.

ಇಲ್ಲಿ ಓದಿ:-ಆಟೋ ಚಾಲಕನಿಂದ ಬುದ್ದಿವಂತನಿಗೆ ಬಂದ ಆ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ನೀವೂ ಸಲಹೆ ನೀಡಬಹುದು:-

ಇದು ಮೊದಲನೆ ಭಾಗವಾಗಿದ್ದು, ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉಪೇಂದ್ರರವರು ಹೇಳಿದ್ದಾರೆ.

ಪ್ರಣಾಳಿಕೆಗೆ ಸಲಹೆ ಮತ್ತು ಅಭಿಪ್ರಾಯ ನೀಡಲು ಮೊಬೈಲ್‌- 9845396204, 9845396804 ಮತ್ತು ideaskpjpuppi@ gmail.com

 

 

 

 

 

 

 

 

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…