News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

1900

ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ  ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

 

24 ಅಂಶಗಳಿರುವ ಈ ಪ್ರಣಾಳಿಕೆಯಲ್ಲಿ ಸಂಪೂರ್ಣ ಪಾರದರ್ಶಕ ಆಡಳಿತ ನೀಡುವ ಬಗ್ಗೆ ಆಶ್ವಾಸನೆ ನೀಡಲಾಗಿದೆ. ಈ ಪ್ರಣಾಳಿಕೆಯನ್ನು ಸಂಪೂರ್ಣವಾಗಿ ಓದಿದ್ರೆ, ನಿಮಗೆ ಅನ್ನಿಸಬಹುದು ಇದು ಯಾವುದೋ ಫಿಲ್ಮಗೆ ಬರೆದ ಸ್ಕ್ರಿಪ್ಟ್ ನಂತೆ ಇದೆಯಲ್ಲಾ ಎಂದು. ಯಾಕೆಂದ್ರೆ ಈ ರೀತಿ ಅಂಶಗಳನ್ನು ನಾವು ಚಲನಚಿತ್ರಗಳಲ್ಲಿ ಮಾತ್ರ ನೋಡಲಿಕ್ಕೆ ಸಾದ್ಯ.ಉಪೇಂದ್ರರವರು ಗೆದ್ದು ಈ ಪ್ರನಾಳಿಕೆಯಲ್ಲಿರುವಂತೆ ಆಡಳಿತ ಮಾಡಿದ್ದೇ ಆದಲ್ಲಿ ನಮ್ಮ ರಾಜ್ಯ 2020ಗೆ “ಸೂಪರ್ ರಾಜ್ಯ” ಆಗೋದ್ರಲ್ಲಿ ಡವ್’ಟೆ ಬೇಡ…

 

ಇಲ್ಲಿವೆ ನೋಡಿ ಈ ಪ್ರಣಾಳಿಕೆಯಲ್ಲಿರುವ 24 ಅಂಶಗಳು:-

  • ಪ್ರಜೆಗಳನ್ನು ಸೇರಿಸಿಕೊಂಡು ಸಂಪೂರ್ಣ ಪಾರದರ್ಶಕ ಆಡಳಿತ ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ.
  • ಪ್ರಜೆಗಳ ನೇರ ಸಂಪರ್ಕಕ್ಕಾಗಿ ಟಿವಿ, ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್, ಯುಟ್ಯೂಬ್ ಚಾನಲ್)ಮತ್ತು ಮೊಬೈಲ್ ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಲಾಗುವುದು.
  • ಪ್ರಜೆಗಳು ಮೊಬೈಲ್ ಅಪ್ಲಿಕೇಶನ್‍ ಮೂಲಕ ತಮ್ಮ ಕ್ಷೇತ್ರ, ಗ್ರಾಮ, ನಗರಗಳ ಸಮಸ್ಯಗಳ ಕುರಿತು ಚಿತ್ರಗಳು, ವಿಡಿಯೋ, ಲಿಖಿತ ಪತ್ರ, ಮತ್ತು ಆಡಿಯೋ ಮಾಡಿ ಆ ಕ್ಷೇತ್ರಗಳಿಗೆ ಸಂಭಂದಪಟ್ಟ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ದೂರುಗಳನ್ನು ಸಲ್ಲಿಸಬಹುದು, ಇದಕ್ಕೆ ನಿರ್ಧಿಷ್ಟ ಕಾಲಾವಧಿಯೊಳಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಈ ದೂರು ಮೇಲ್ಮಟ್ಟದ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಯವರೆಗೂ ವರ್ಗಾವಣೆಯಾಗುತ್ತದೆ.
  • ಸರಿಯಾದ ಸಮಯಕ್ಕೆ ಜನಗಳಿಗೆ ಸ್ಪಂದಿಸಿ ಅವರ ಸಮಸ್ಯಗಳನ್ನು ಪರಿಹರಿಸಿದಂತ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಂಕಗಳನ್ನು ನೀಡಲಾಗುವುದು. ಈ ಅಂಕಗಳೇ ಅವರ ಮುಂದಿನ ಚುನಾವಣೆಗೆ ಮತ್ತು ಅಧಿಕಾರಿಗಳ ಬಡ್ತಿಗೆ ಮಾನದಂಡವಾಗಲಿದೆ.
  • ಕಡಿಮೆ ಅಂಕಗಳಿಸಿದವರಿಗೆ ಶಿಸ್ತುಕ್ರಮ ಮತ್ತು ವೇತನ ಕಡಿತ ಮಾಡಲಾಗುವುದು.
  • ಪ್ರತಿ ಇಲಾಖೆಯ ನೌಕರರನ್ನು ಗುರುತಿಗೆ, ಆಯಾ ಇಲಾಖೆಗಳಿಗೆ ಸಂಬಂದಿಸಿದಂತೆ  ಸಮವಸ್ತ್ರ ಮತ್ತು ಇಲಾಖೆಯ ಬ್ಯಾಡ್ಜ್’ಗಳನ್ನು ಧರಿಸಬೇಕಾಗುತ್ತದೆ. ಪ್ರಜೆಗಳು ಇಲಾಖೆಗಳ ನೌಕರರನ್ನು ಗುರುತಿಸಲು ಇದು ಸಹಾಯವಾಗುತ್ತದೆ.
  • ಎಲ್ಲಾ ಸರ್ಕಾರಿ ಕಛೇರಿಗಳು ಹಾಗೂ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ (ರಿಜಿಸ್ಟರ್), ವೈಫೈ, ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಆಳವಡಿಸಲಾಗುತ್ತದೆ.
  • ವಿಧಾನಸೌಧದ ಕಾರ್ಯ ಚಟುವಟಿಕೆ ಪರದೆ ಮೇಲೆ ಪ್ರಸಾರ ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಕಾರ್ಯ ಚಟುವಟಿಕೆ, ಯೋಜನೆಗಳು, ಕಾಮಗಾರಿಗಳು, ಚರ್ಚೆಗಳು ದೃಶ್ಯ ಮಾಧ್ಯಮಗಳ ಸಾಕ್ಷಿ & ದಾಖಲೆಗಳೊಂದಿಗೆ ದೊಡ್ಡ ಪರದೆಯ ಮೇಲೆ ಬಿತ್ತರಿಸಿ ಅದರ ಆಧಾರದ ಮೇಲೆಯೇ ಚರ್ಚೆ ನಡೆಸಬೇಕು.
  • ಮಾಧ್ಯಮಗಳಲ್ಲಿ ಎಲ್ಲ ಜನಪ್ರತಿನಿಧಿಗಳು ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ-ಪುರಾವೆಗಳೊಂದಿಗೆ ದೃಶ್ಯ ಮಾಧ್ಯಮಗಳ ಮುಖಾಂತರ ನೇರಪ್ರಸಾರದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಈ ಪ್ರಕ್ರಿಯೆಗಳನ್ನು ಪ್ರಜೆಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸುವಂತೆ ಮಾಡಲಾಗುವುದು ಇದೆ ಸಮಯದಲ್ಲಿ ಪ್ರಜೆಗಳು ಸಹ ನೇರ ಚರ್ಚೆಯೊಂದಿಗೆ ಭಾಗವಹಿಸಿ ತಮ್ಮ ಸಮಸ್ಯಗಳನ್ನು ಬಗೆಹರಿಸಕೊಲ್ಲಬಹುದು.
  • ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಅದರ ಪ್ರತಿಯೊಂದು ಟೆಂಡರ್ ಪ್ರಕ್ರಿಯೆಗಳ ಭಾಗವಹಿಸುವಿಕೆಯು ಸಂಪೂರ್ಣವಾಗಿ ಆನ್ ಲೈನ್ ಮೂಲಕ ಮತ್ತು ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಪಾರದರ್ಶಕವಾಗಿ ಪ್ರಸಾರ ಮಾಡಲಾಗುವುದು.
  • ಗುತ್ತಿಗೆದಾರರಿಗೆ ಕೊಡಲಾಗುವ ಯೋಜನೆಗಳ ಖರ್ಚು- ವೆಚ್ಚಗಳನ್ನು ಅಧಿಕೃತ ದೃಶ್ಯ ದಾಖಲೆಗಳ(ಬಿಲ್) ಮತ್ತು ಹಾಜರಾತಿ ವಿವರಣೆಗಳ ಆಧಾರದ ಮೇಲೆಯೇ ಕೊಡಲಾಗುವುದು. ಕಾರ್ಮಿಕರ ಹಾಜರಾತಿ ದಾಖಲೆಗಳನ್ನು ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಬಹಿರಂಗಪಡಿಸತಕ್ಕದ್ದು.
  • ಪ್ರತಿ ಕಾಮಗಾರಿಯ ಪ್ರತಿ ಹಂತವೂ ಬೆಳವಣಿಗೆಗಳ ದಾಖಲೆಗಳೊಂದಿಗೆ ಪ್ರತಿ ಹಂತಗಳ ನೇರ ಪ್ರಸಾರವನ್ನು ಪಾರದರ್ಶಕವಾಗಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ನೋಡಲು ಅವಕಾಶವಿರುತ್ತದೆ.
  • ಜನಪ್ರತಿನಿಧಿ, ನೌಕರರ ಕಾರ್ಯ ಟಿವಿಯಲ್ಲಿ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.
  • ತಿಂಗಳಿಗೊಮ್ಮೆ ಪ್ರಜೆಗಳು, ಜನಪ್ರತಿನಿಧಿ, ನೌಕರರ ಸಂವಾದಗಳು ಅವರವರ ಕ್ಷೇತ್ರಗಳಲ್ಲಿ ಟಿವಿ ಚಾನಲ್‍ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ದೃಶ್ಯ ದಾಖಲೆಗಳೊಂದಿಗೆ ಪ್ರಸಾರಗೊಳ್ಳುತ್ತವೆ.
  • ಸಿಎಂ, ಸಚಿವರಿಂದ ಆಗಾಗ ಪರಿಶೀಲನೆ ಮತ್ತು ಪ್ರಜೆಗಳಿಗೆ ನೇರ ಪ್ರಸಾರದ ವ್ಯವಸ್ಥೆ ಇರುತ್ತದೆ.
  • ಆಡಳಿತ ಸರ್ಕಾರವು ಯಾವುದೇ ಸರ್ಕಾರೀ ವರ್ಗಾವಣೆಗಳನ್ನು ಮಾಡುವಾಗ ಸರಿಯಾದ ಕಾರಣ, ದಾಖಲೆಗಳು ಮತ್ತು ಸಾಕ್ಷಿಗಳನ್ನು ಕೊಟ್ಟು ನೇರ ಪ್ರಸಾರದೊಂದಿಗೆ ವರ್ಗಾವಣೆಗಳನ್ನು ಮಾಡಬೇಕು.
  • ಎಲ್ಲಾ ಸರ್ಕಾರೀ ಇಲಾಖೆಗಳ ಸಂದರ್ಶನಗಳು ಹಾಗೂ ಆಯ್ಕೆಗಳ ಪ್ರಕ್ರಿಯೆಗಳು ದೃಶ್ಯ ಮಾಧ್ಯಮದಲ್ಲಿ ನೇರ ಪ್ರಸಾರ ಮಾಡಲಾಗುವುದು.
  • ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ, ಆದಾಯ ದಾಖಲೆ ಮಾಹಿತಿಗಳನ್ನು ಸಾರ್ವಜನಿಕರಿಗೆ ತೆರೆದಿಡಲಾಗುವುದು.
  • ಮಾಹಿತಿ ಕೊಟ್ಟರೆ ಮಾತ್ರ ಚುನಾಯಿತ ಜನಪ್ರತಿನಿಧಿಗೆ ವೇತನಗಳು, ಸೌಲಭ್ಯಗಳು ದೊರೆಯುತ್ತದೆ.
  • ಪ್ರಜೆಗಳು ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡುವಂತೆ, ಮಾಜಿ ಜನಪ್ರತಿನಿಧಿ, ನೌಕರರು ಪಿಂಚಣಿಗಳನ್ನು ಬಿಡಬಹುದು.
  • ಸ್ವಯಂಪ್ರೇರಿತರಾಗಿ ಬಿಟ್ಟುಕೊಟ್ಟ ಪಿಂಚಣಿ ಹಣದಿಂದ, ವೃದ್ಧಾಶ್ರಮ, ವಸತಿರಹಿತರ ಅಭಿವೃಧ್ಧಿ ಮಾಡಲಾಗುವುದು.
  • ಎಲ್ಲಾ ಸರ್ಕಾರಿ ಯೋಜನೆಗಳು ಸಂಪೂರ್ಣಗೊಂಡು ಸಂಬಂಧಪಟ್ಟ ಅಧಿಕಾರಿಗಳ ಪರೀಕ್ಷೆ-ಅನುಮತಿ ನಂತರ ಸಾರ್ವಜನಿಕರ ಬಳಕೆಗೆ ನೇರವಾಗಿ ತೆರೆದಿಡಲಾಗುವುದು. ಯಾವುದೇ ರೀತಿಯ ಲೋಕಾರ್ಪಣಾ ಸಮಾರಂಭ, ಸಂಭ್ರಮ, ಉದ್ಗಾಟನೆಗಳನ್ನು ನಡೆಸುವುದು ಹಾಗೂ ಜನಪ್ರತಿನಿಧಿಗಳು/ ಅಧಿಕಾರಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ.
  • ಶಾಸಕಾಂಗ ವೇತನ, ಪಿಂಚಣಿ & ಭತ್ಯೆ ಕಾಯ್ದೆ 1952ರ ಕಾನೂನು ತಿದ್ದುಪಡಿ ಮಾಡಲಾಗುವುದು.
  • ಮೇಲ್ಕಂಡ ಪ್ರಣಾಳಿಕೆ ಅಂಶಗಳನ್ನು ಜಾರಿಗೆ ತರಲು ಅಗತ್ಯ ಕಾನೂನು ಜಾರಿ ಮಾಡಲಾಗುವುದು.

ಇಲ್ಲಿ ಓದಿ:-ಆಟೋ ಚಾಲಕನಿಂದ ಬುದ್ದಿವಂತನಿಗೆ ಬಂದ ಆ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ನೀವೂ ಸಲಹೆ ನೀಡಬಹುದು:-

ಇದು ಮೊದಲನೆ ಭಾಗವಾಗಿದ್ದು, ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉಪೇಂದ್ರರವರು ಹೇಳಿದ್ದಾರೆ.

ಪ್ರಣಾಳಿಕೆಗೆ ಸಲಹೆ ಮತ್ತು ಅಭಿಪ್ರಾಯ ನೀಡಲು ಮೊಬೈಲ್‌- 9845396204, 9845396804 ಮತ್ತು ideaskpjpuppi@ gmail.com

 

 

 

 

 

 

 

 

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

    ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…