News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

1898

ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ  ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

 

24 ಅಂಶಗಳಿರುವ ಈ ಪ್ರಣಾಳಿಕೆಯಲ್ಲಿ ಸಂಪೂರ್ಣ ಪಾರದರ್ಶಕ ಆಡಳಿತ ನೀಡುವ ಬಗ್ಗೆ ಆಶ್ವಾಸನೆ ನೀಡಲಾಗಿದೆ. ಈ ಪ್ರಣಾಳಿಕೆಯನ್ನು ಸಂಪೂರ್ಣವಾಗಿ ಓದಿದ್ರೆ, ನಿಮಗೆ ಅನ್ನಿಸಬಹುದು ಇದು ಯಾವುದೋ ಫಿಲ್ಮಗೆ ಬರೆದ ಸ್ಕ್ರಿಪ್ಟ್ ನಂತೆ ಇದೆಯಲ್ಲಾ ಎಂದು. ಯಾಕೆಂದ್ರೆ ಈ ರೀತಿ ಅಂಶಗಳನ್ನು ನಾವು ಚಲನಚಿತ್ರಗಳಲ್ಲಿ ಮಾತ್ರ ನೋಡಲಿಕ್ಕೆ ಸಾದ್ಯ.ಉಪೇಂದ್ರರವರು ಗೆದ್ದು ಈ ಪ್ರನಾಳಿಕೆಯಲ್ಲಿರುವಂತೆ ಆಡಳಿತ ಮಾಡಿದ್ದೇ ಆದಲ್ಲಿ ನಮ್ಮ ರಾಜ್ಯ 2020ಗೆ “ಸೂಪರ್ ರಾಜ್ಯ” ಆಗೋದ್ರಲ್ಲಿ ಡವ್’ಟೆ ಬೇಡ…

 

ಇಲ್ಲಿವೆ ನೋಡಿ ಈ ಪ್ರಣಾಳಿಕೆಯಲ್ಲಿರುವ 24 ಅಂಶಗಳು:-

  • ಪ್ರಜೆಗಳನ್ನು ಸೇರಿಸಿಕೊಂಡು ಸಂಪೂರ್ಣ ಪಾರದರ್ಶಕ ಆಡಳಿತ ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ.
  • ಪ್ರಜೆಗಳ ನೇರ ಸಂಪರ್ಕಕ್ಕಾಗಿ ಟಿವಿ, ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್, ಯುಟ್ಯೂಬ್ ಚಾನಲ್)ಮತ್ತು ಮೊಬೈಲ್ ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಲಾಗುವುದು.
  • ಪ್ರಜೆಗಳು ಮೊಬೈಲ್ ಅಪ್ಲಿಕೇಶನ್‍ ಮೂಲಕ ತಮ್ಮ ಕ್ಷೇತ್ರ, ಗ್ರಾಮ, ನಗರಗಳ ಸಮಸ್ಯಗಳ ಕುರಿತು ಚಿತ್ರಗಳು, ವಿಡಿಯೋ, ಲಿಖಿತ ಪತ್ರ, ಮತ್ತು ಆಡಿಯೋ ಮಾಡಿ ಆ ಕ್ಷೇತ್ರಗಳಿಗೆ ಸಂಭಂದಪಟ್ಟ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ದೂರುಗಳನ್ನು ಸಲ್ಲಿಸಬಹುದು, ಇದಕ್ಕೆ ನಿರ್ಧಿಷ್ಟ ಕಾಲಾವಧಿಯೊಳಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಈ ದೂರು ಮೇಲ್ಮಟ್ಟದ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಯವರೆಗೂ ವರ್ಗಾವಣೆಯಾಗುತ್ತದೆ.
  • ಸರಿಯಾದ ಸಮಯಕ್ಕೆ ಜನಗಳಿಗೆ ಸ್ಪಂದಿಸಿ ಅವರ ಸಮಸ್ಯಗಳನ್ನು ಪರಿಹರಿಸಿದಂತ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಂಕಗಳನ್ನು ನೀಡಲಾಗುವುದು. ಈ ಅಂಕಗಳೇ ಅವರ ಮುಂದಿನ ಚುನಾವಣೆಗೆ ಮತ್ತು ಅಧಿಕಾರಿಗಳ ಬಡ್ತಿಗೆ ಮಾನದಂಡವಾಗಲಿದೆ.
  • ಕಡಿಮೆ ಅಂಕಗಳಿಸಿದವರಿಗೆ ಶಿಸ್ತುಕ್ರಮ ಮತ್ತು ವೇತನ ಕಡಿತ ಮಾಡಲಾಗುವುದು.
  • ಪ್ರತಿ ಇಲಾಖೆಯ ನೌಕರರನ್ನು ಗುರುತಿಗೆ, ಆಯಾ ಇಲಾಖೆಗಳಿಗೆ ಸಂಬಂದಿಸಿದಂತೆ  ಸಮವಸ್ತ್ರ ಮತ್ತು ಇಲಾಖೆಯ ಬ್ಯಾಡ್ಜ್’ಗಳನ್ನು ಧರಿಸಬೇಕಾಗುತ್ತದೆ. ಪ್ರಜೆಗಳು ಇಲಾಖೆಗಳ ನೌಕರರನ್ನು ಗುರುತಿಸಲು ಇದು ಸಹಾಯವಾಗುತ್ತದೆ.
  • ಎಲ್ಲಾ ಸರ್ಕಾರಿ ಕಛೇರಿಗಳು ಹಾಗೂ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ (ರಿಜಿಸ್ಟರ್), ವೈಫೈ, ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಆಳವಡಿಸಲಾಗುತ್ತದೆ.
  • ವಿಧಾನಸೌಧದ ಕಾರ್ಯ ಚಟುವಟಿಕೆ ಪರದೆ ಮೇಲೆ ಪ್ರಸಾರ ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಕಾರ್ಯ ಚಟುವಟಿಕೆ, ಯೋಜನೆಗಳು, ಕಾಮಗಾರಿಗಳು, ಚರ್ಚೆಗಳು ದೃಶ್ಯ ಮಾಧ್ಯಮಗಳ ಸಾಕ್ಷಿ & ದಾಖಲೆಗಳೊಂದಿಗೆ ದೊಡ್ಡ ಪರದೆಯ ಮೇಲೆ ಬಿತ್ತರಿಸಿ ಅದರ ಆಧಾರದ ಮೇಲೆಯೇ ಚರ್ಚೆ ನಡೆಸಬೇಕು.
  • ಮಾಧ್ಯಮಗಳಲ್ಲಿ ಎಲ್ಲ ಜನಪ್ರತಿನಿಧಿಗಳು ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ-ಪುರಾವೆಗಳೊಂದಿಗೆ ದೃಶ್ಯ ಮಾಧ್ಯಮಗಳ ಮುಖಾಂತರ ನೇರಪ್ರಸಾರದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಈ ಪ್ರಕ್ರಿಯೆಗಳನ್ನು ಪ್ರಜೆಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸುವಂತೆ ಮಾಡಲಾಗುವುದು ಇದೆ ಸಮಯದಲ್ಲಿ ಪ್ರಜೆಗಳು ಸಹ ನೇರ ಚರ್ಚೆಯೊಂದಿಗೆ ಭಾಗವಹಿಸಿ ತಮ್ಮ ಸಮಸ್ಯಗಳನ್ನು ಬಗೆಹರಿಸಕೊಲ್ಲಬಹುದು.
  • ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಅದರ ಪ್ರತಿಯೊಂದು ಟೆಂಡರ್ ಪ್ರಕ್ರಿಯೆಗಳ ಭಾಗವಹಿಸುವಿಕೆಯು ಸಂಪೂರ್ಣವಾಗಿ ಆನ್ ಲೈನ್ ಮೂಲಕ ಮತ್ತು ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಪಾರದರ್ಶಕವಾಗಿ ಪ್ರಸಾರ ಮಾಡಲಾಗುವುದು.
  • ಗುತ್ತಿಗೆದಾರರಿಗೆ ಕೊಡಲಾಗುವ ಯೋಜನೆಗಳ ಖರ್ಚು- ವೆಚ್ಚಗಳನ್ನು ಅಧಿಕೃತ ದೃಶ್ಯ ದಾಖಲೆಗಳ(ಬಿಲ್) ಮತ್ತು ಹಾಜರಾತಿ ವಿವರಣೆಗಳ ಆಧಾರದ ಮೇಲೆಯೇ ಕೊಡಲಾಗುವುದು. ಕಾರ್ಮಿಕರ ಹಾಜರಾತಿ ದಾಖಲೆಗಳನ್ನು ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಬಹಿರಂಗಪಡಿಸತಕ್ಕದ್ದು.
  • ಪ್ರತಿ ಕಾಮಗಾರಿಯ ಪ್ರತಿ ಹಂತವೂ ಬೆಳವಣಿಗೆಗಳ ದಾಖಲೆಗಳೊಂದಿಗೆ ಪ್ರತಿ ಹಂತಗಳ ನೇರ ಪ್ರಸಾರವನ್ನು ಪಾರದರ್ಶಕವಾಗಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ನೋಡಲು ಅವಕಾಶವಿರುತ್ತದೆ.
  • ಜನಪ್ರತಿನಿಧಿ, ನೌಕರರ ಕಾರ್ಯ ಟಿವಿಯಲ್ಲಿ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.
  • ತಿಂಗಳಿಗೊಮ್ಮೆ ಪ್ರಜೆಗಳು, ಜನಪ್ರತಿನಿಧಿ, ನೌಕರರ ಸಂವಾದಗಳು ಅವರವರ ಕ್ಷೇತ್ರಗಳಲ್ಲಿ ಟಿವಿ ಚಾನಲ್‍ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ದೃಶ್ಯ ದಾಖಲೆಗಳೊಂದಿಗೆ ಪ್ರಸಾರಗೊಳ್ಳುತ್ತವೆ.
  • ಸಿಎಂ, ಸಚಿವರಿಂದ ಆಗಾಗ ಪರಿಶೀಲನೆ ಮತ್ತು ಪ್ರಜೆಗಳಿಗೆ ನೇರ ಪ್ರಸಾರದ ವ್ಯವಸ್ಥೆ ಇರುತ್ತದೆ.
  • ಆಡಳಿತ ಸರ್ಕಾರವು ಯಾವುದೇ ಸರ್ಕಾರೀ ವರ್ಗಾವಣೆಗಳನ್ನು ಮಾಡುವಾಗ ಸರಿಯಾದ ಕಾರಣ, ದಾಖಲೆಗಳು ಮತ್ತು ಸಾಕ್ಷಿಗಳನ್ನು ಕೊಟ್ಟು ನೇರ ಪ್ರಸಾರದೊಂದಿಗೆ ವರ್ಗಾವಣೆಗಳನ್ನು ಮಾಡಬೇಕು.
  • ಎಲ್ಲಾ ಸರ್ಕಾರೀ ಇಲಾಖೆಗಳ ಸಂದರ್ಶನಗಳು ಹಾಗೂ ಆಯ್ಕೆಗಳ ಪ್ರಕ್ರಿಯೆಗಳು ದೃಶ್ಯ ಮಾಧ್ಯಮದಲ್ಲಿ ನೇರ ಪ್ರಸಾರ ಮಾಡಲಾಗುವುದು.
  • ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ, ಆದಾಯ ದಾಖಲೆ ಮಾಹಿತಿಗಳನ್ನು ಸಾರ್ವಜನಿಕರಿಗೆ ತೆರೆದಿಡಲಾಗುವುದು.
  • ಮಾಹಿತಿ ಕೊಟ್ಟರೆ ಮಾತ್ರ ಚುನಾಯಿತ ಜನಪ್ರತಿನಿಧಿಗೆ ವೇತನಗಳು, ಸೌಲಭ್ಯಗಳು ದೊರೆಯುತ್ತದೆ.
  • ಪ್ರಜೆಗಳು ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡುವಂತೆ, ಮಾಜಿ ಜನಪ್ರತಿನಿಧಿ, ನೌಕರರು ಪಿಂಚಣಿಗಳನ್ನು ಬಿಡಬಹುದು.
  • ಸ್ವಯಂಪ್ರೇರಿತರಾಗಿ ಬಿಟ್ಟುಕೊಟ್ಟ ಪಿಂಚಣಿ ಹಣದಿಂದ, ವೃದ್ಧಾಶ್ರಮ, ವಸತಿರಹಿತರ ಅಭಿವೃಧ್ಧಿ ಮಾಡಲಾಗುವುದು.
  • ಎಲ್ಲಾ ಸರ್ಕಾರಿ ಯೋಜನೆಗಳು ಸಂಪೂರ್ಣಗೊಂಡು ಸಂಬಂಧಪಟ್ಟ ಅಧಿಕಾರಿಗಳ ಪರೀಕ್ಷೆ-ಅನುಮತಿ ನಂತರ ಸಾರ್ವಜನಿಕರ ಬಳಕೆಗೆ ನೇರವಾಗಿ ತೆರೆದಿಡಲಾಗುವುದು. ಯಾವುದೇ ರೀತಿಯ ಲೋಕಾರ್ಪಣಾ ಸಮಾರಂಭ, ಸಂಭ್ರಮ, ಉದ್ಗಾಟನೆಗಳನ್ನು ನಡೆಸುವುದು ಹಾಗೂ ಜನಪ್ರತಿನಿಧಿಗಳು/ ಅಧಿಕಾರಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ.
  • ಶಾಸಕಾಂಗ ವೇತನ, ಪಿಂಚಣಿ & ಭತ್ಯೆ ಕಾಯ್ದೆ 1952ರ ಕಾನೂನು ತಿದ್ದುಪಡಿ ಮಾಡಲಾಗುವುದು.
  • ಮೇಲ್ಕಂಡ ಪ್ರಣಾಳಿಕೆ ಅಂಶಗಳನ್ನು ಜಾರಿಗೆ ತರಲು ಅಗತ್ಯ ಕಾನೂನು ಜಾರಿ ಮಾಡಲಾಗುವುದು.

ಇಲ್ಲಿ ಓದಿ:-ಆಟೋ ಚಾಲಕನಿಂದ ಬುದ್ದಿವಂತನಿಗೆ ಬಂದ ಆ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ನೀವೂ ಸಲಹೆ ನೀಡಬಹುದು:-

ಇದು ಮೊದಲನೆ ಭಾಗವಾಗಿದ್ದು, ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉಪೇಂದ್ರರವರು ಹೇಳಿದ್ದಾರೆ.

ಪ್ರಣಾಳಿಕೆಗೆ ಸಲಹೆ ಮತ್ತು ಅಭಿಪ್ರಾಯ ನೀಡಲು ಮೊಬೈಲ್‌- 9845396204, 9845396804 ಮತ್ತು ideaskpjpuppi@ gmail.com

 

 

 

 

 

 

 

 

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…