ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ ಜೂನ್ನಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮ್ಮ ಸಮಸ್ಯೆ ವಿವರಿಸಿದ್ದರು.

ಅಲ್ಲದೇ 2018ರ ಸೆ.15ರಂದು ಪಿಎಂ ಟ್ವಿಟರ್ ಖಾತೆಗೆ ಸಮಸ್ಯೆ ಬರೆದು ಟ್ಯಾಗ್ ಮಾಡಿದ್ದರು. ಅದರ ಪ್ರತಿಫಲವಾಗಿ 2018ರ ಅ.1ರಂದು ರೂರಲ್ ಎಲೆಕ್ಟ್ರಿಕಲ್ ಕಾರ್ಪೊರೇಶನ್ ಲಿಮಿಟೆಡ್ ವತಿಯಿಂದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮರೇಶಗೆ ಉತ್ತರ ಬಂತು. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆಯಡಿ ಆಯ್ದ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿರುವ ವಿಷಯವನ್ನು ಪತ್ರದಲ್ಲಿ ಉಲ್ಲೇಖೀಸಲಾಗಿತ್ತು.

ವಿದ್ಯುತ್ ಇಲ್ಲದೇ ಚಿಮಣಿ ಬೆಳಕಿನಲ್ಲಿ ಕಾಲ ಕಳೆಯುತ್ತಿದ್ದ ದೊಡ್ಡಿಗಳಿಗೆ ಈಗ ಬೆಳಕಿನ ಸೌಭಾಗ್ಯ ಬಂದಂತಾಗಿದೆ. ಜೆಸ್ಕಾಂ ವಿಭಾಗೀಯ ಕಚೇರಿ ಸಹಾಯಕ ಎಂಜಿನಿಯರ್ ಹಳ್ಳಿಗಳಿಗೆ ತೆರಳಿ ಸಮೀಕ್ಷೆ ನಡೆಸಿ ಅಂದಾಜು ಪಟ್ಟಿ ಸಿದ್ಧಪಡಿಸಿದ್ದರು. ಈಗಾಗಲೇ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳನ್ನು ಹಾಕಿದ್ದು, ಬಹುತೇಕ ಮನೆಗಳಿಗೆ ಮೀಟರ್ ಅಳವಡಿಸಲಾಗಿದೆ.ಜತೆಗೆ, ಟ್ರಾನ್ಸ್ಫಾರ್ಮರ್ ತರಲಾಗಿದ್ದು, ಒಂದೆರಡು ದಿನಗಳಲ್ಲಿ ಅಳವಡಿಸುವ ಸಾಧ್ಯತೆಯಿದೆ. ಇದು ಕೇವಲ ಮೂರು ದೊಡ್ಡಿಗಳಿಗೆ ಮಾತ್ರವಲ್ಲದೇ ಇನ್ನುಳಿದ ಹತ್ತಾರು ದೊಡ್ಡಿಗಳ ಭಾಗ್ಯದ ಬಾಗಿಲು ತೆರೆಸಿದೆ. ಜೆಸ್ಕಾಂ ಅಧಿಕಾರಿಗಳ ಮಾಹಿತಿ ಪ್ರಕಾರ 1,400 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.

ತಮ್ಮ ದೊಡ್ಡಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಇಲ್ಲದ ಕಾರಣ ಮಾವನ ಮನೆಯಲ್ಲಿದ್ದು ಓದಿದ ಅಮರೇಶ, ಎಂಟೆಕ್ ಪದವಿ ಪಡೆದಿದ್ದಾರೆ. ಬಳಿಕ ಮುಂಬೈನಲ್ಲಿ ಕೆಲ ಕಾಲ ಉದ್ಯೋಗ ಮಾಡಿ ಈಗ ಪುನಃ ಊರು ಸೇರಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತಮ್ಮ ದೊಡ್ಡಿಗಳ ಸಮಸ್ಯೆ ನೀಗದ ಕಾರಣ ಪ್ರಧಾನಿ ಕಚೇರಿಯ ಮೊರೆ ಹೋಗಿದ್ದಾರೆ. ಅವರ ಸಣ್ಣ ನಡೆ ಈಗ ದೊಡ್ಡಮಟ್ಟದ ಪ್ರತಿಫಲವನ್ನೇ ನೀಡಿದೆ.
ಅನೇಕ ದೊಡ್ಡಿಗಳಿಗೆ ತೆರಳಿ ಶುಲ್ಕ ಪಾವತಿಸಿದರೆ ವಿದ್ಯುತ್ ನೀಡುವುದಾಗಿ ನಾವು ಈ ಮೊದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ಜನರು ಶುಲ್ಕ ಕಟ್ಟಲು ಮುಂದಾಗುತ್ತಿರಲಿಲ್ಲ. ಸೌಭಾಗ್ಯ ಯೋಜನೆಯಡಿ ವಿದ್ಯುತ್ ನೀಡುವಂತೆ ನಮಗೆ ನಿರ್ದೇಶನ ಬಂದ ಕಾರಣ ಆ ಮೂರು ದೊಡ್ಡಿಗಳ ಜತೆ ಇನ್ನೂ ಅನೇಕ ಕಡೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ವಿದ್ಯುತ್ ಸರಬರಾಜು ಆರಂಭಿಸಲಾಗುವುದು. ಅಲ್ಲಿನ ನಿವಾಸಿಗಳು ಇನ್ನು ಮುಂದೆ ಸರಿಯಾಗಿ ವಿದ್ಯುತ್ ಬಿಲ್ ಪಾವತಿಸಿದರೆ ಸಾಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.