News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

59

ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ ಜೂನ್‌ನಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮ್ಮ ಸಮಸ್ಯೆ ವಿವರಿಸಿದ್ದರು.

ಅಲ್ಲದೇ 2018ರ ಸೆ.15ರಂದು ಪಿಎಂ ಟ್ವಿಟರ್‌ ಖಾತೆಗೆ ಸಮಸ್ಯೆ ಬರೆದು ಟ್ಯಾಗ್‌ ಮಾಡಿದ್ದರು. ಅದರ ಪ್ರತಿಫಲವಾಗಿ 2018ರ ಅ.1ರಂದು ರೂರಲ್‌ ಎಲೆಕ್ಟ್ರಿಕಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ವತಿಯಿಂದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮರೇಶಗೆ ಉತ್ತರ ಬಂತು. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆಯಡಿ ಆಯ್ದ ದೊಡ್ಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ವಿಷಯವನ್ನು ಪತ್ರದಲ್ಲಿ ಉಲ್ಲೇಖೀಸಲಾಗಿತ್ತು.

ವಿದ್ಯುತ್‌ ಇಲ್ಲದೇ ಚಿಮಣಿ ಬೆಳಕಿನಲ್ಲಿ ಕಾಲ ಕಳೆಯುತ್ತಿದ್ದ ದೊಡ್ಡಿಗಳಿಗೆ ಈಗ ಬೆಳಕಿನ ಸೌಭಾಗ್ಯ ಬಂದಂತಾಗಿದೆ. ಜೆಸ್ಕಾಂ ವಿಭಾಗೀಯ ಕಚೇರಿ ಸಹಾಯಕ ಎಂಜಿನಿಯರ್‌ ಹಳ್ಳಿಗಳಿಗೆ ತೆರಳಿ ಸಮೀಕ್ಷೆ ನಡೆಸಿ ಅಂದಾಜು ಪಟ್ಟಿ ಸಿದ್ಧಪಡಿಸಿದ್ದರು. ಈಗಾಗಲೇ ಗ್ರಾಮಗಳಲ್ಲಿ ವಿದ್ಯುತ್‌ ಕಂಬಗಳನ್ನು ಹಾಕಿದ್ದು, ಬಹುತೇಕ ಮನೆಗಳಿಗೆ ಮೀಟರ್‌ ಅಳವಡಿಸಲಾಗಿದೆ.ಜತೆಗೆ, ಟ್ರಾನ್ಸ್‌ಫಾರ್ಮರ್‌ ತರಲಾಗಿದ್ದು, ಒಂದೆರಡು ದಿನಗಳಲ್ಲಿ ಅಳವಡಿಸುವ ಸಾಧ್ಯತೆಯಿದೆ. ಇದು ಕೇವಲ ಮೂರು ದೊಡ್ಡಿಗಳಿಗೆ ಮಾತ್ರವಲ್ಲದೇ ಇನ್ನುಳಿದ ಹತ್ತಾರು ದೊಡ್ಡಿಗಳ ಭಾಗ್ಯದ ಬಾಗಿಲು ತೆರೆಸಿದೆ. ಜೆಸ್ಕಾಂ ಅಧಿಕಾರಿಗಳ ಮಾಹಿತಿ ಪ್ರಕಾರ 1,400 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ.

 ತಮ್ಮ ದೊಡ್ಡಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಇಲ್ಲದ ಕಾರಣ ಮಾವನ ಮನೆಯಲ್ಲಿದ್ದು ಓದಿದ ಅಮರೇಶ, ಎಂಟೆಕ್‌ ಪದವಿ ಪಡೆದಿದ್ದಾರೆ. ಬಳಿಕ ಮುಂಬೈನಲ್ಲಿ ಕೆಲ ಕಾಲ ಉದ್ಯೋಗ ಮಾಡಿ ಈಗ ಪುನಃ ಊರು ಸೇರಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತಮ್ಮ ದೊಡ್ಡಿಗಳ ಸಮಸ್ಯೆ ನೀಗದ ಕಾರಣ ಪ್ರಧಾನಿ ಕಚೇರಿಯ ಮೊರೆ ಹೋಗಿದ್ದಾರೆ. ಅವರ ಸಣ್ಣ ನಡೆ ಈಗ ದೊಡ್ಡಮಟ್ಟದ ಪ್ರತಿಫಲವನ್ನೇ ನೀಡಿದೆ.

ಅನೇಕ ದೊಡ್ಡಿಗಳಿಗೆ ತೆರಳಿ ಶುಲ್ಕ ಪಾವತಿಸಿದರೆ ವಿದ್ಯುತ್‌ ನೀಡುವುದಾಗಿ ನಾವು ಈ ಮೊದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ಜನರು ಶುಲ್ಕ ಕಟ್ಟಲು ಮುಂದಾಗುತ್ತಿರಲಿಲ್ಲ. ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ನೀಡುವಂತೆ ನಮಗೆ ನಿರ್ದೇಶನ ಬಂದ ಕಾರಣ ಆ ಮೂರು ದೊಡ್ಡಿಗಳ ಜತೆ ಇನ್ನೂ ಅನೇಕ ಕಡೆ ವಿದ್ಯುತ್‌ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ವಿದ್ಯುತ್‌ ಸರಬರಾಜು ಆರಂಭಿಸಲಾಗುವುದು. ಅಲ್ಲಿನ ನಿವಾಸಿಗಳು ಇನ್ನು ಮುಂದೆ ಸರಿಯಾಗಿ ವಿದ್ಯುತ್‌ ಬಿಲ್‌ ಪಾವತಿಸಿದರೆ ಸಾಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…