ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ.

ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ ಬೆಳೆ ದರ್ಶಕ್ -2020 ಆಪ್ ಮೂಲಕ ಅಪ್ಲೋಡ್ ಆದ ವಿವರ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು.
ಒಂದು ವೇಳೆ ರೈತರಾಗಲಿ ಅಥವಾ ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿ ದಾಖಲಿಸಿದ್ದರೆ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಲು ಬೆಳೆ ದರ್ಶಕ್ನಲ್ಲಿ ಅವಕಾಶ ಕಲ್ಪಸಲಾಗಿದೆ. ಬೆಳೆ ಸಮೀಕ್ಷೆ ಪೂರ್ಣಗೊಳಿಸಲು ಸೆಪ್ಟಂಬರ್ 30 ಕೊನೆ ದಿನವಾಗಿದ್ದು, ಈಗಾಗಲೇ ಬೆಳೆ ದರ್ಶಕ್ ಆ್ಯಪ್ ಬಿಡುಗಡೆಗೊಳಿಸಿದ್ದು, ರೈತರು 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಸ್ವತಃ ಆ್ಯಪ್ನಲ್ಲಿ ವೀಕ್ಷಿಸಬಹುದಾಗಿದೆ.
ಆ್ಯಪ್ನ್ನು ಡೌನ್ಲೋಡ್ ಮಾಡಿಕೊಳ್ಳಲು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುವ ಬೆಳೆ ದರ್ಶಕ್ ಆ್ಯಪ್ 2020-21 ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
http://play.google.com/store/apps/details?id=com.crop.offcsreportskharif
ಈ ಲಿಂಕ್ ಬಳಸಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದು.

ಆ್ಯಪ್ನ ವಿಶೇಷತೆ: ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರ ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ಜಮೀನಿನಲ್ಲಿ ತೆಗೆದ ಜಿಪಿಎಸ್ ಆಧಾರಿತ ಛಾಯಾಚಿತ್ರ ವೀಕ್ಷಿಸಬಹುದು. ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು
ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಅಂಗೀಕರಿಸಿದ್ದಾರೋ, ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದು. ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮ ಕೈಗೊಂಡಿದ್ದಾರೆ ಎಂದು ರೈತರು ತಿಳಿಯಬಹುದಾಗಿದೆ.
ಪ್ರಯೋಜನಗಳು: ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆನಷ್ಟ ಪರಿಹಾರ, ಬೆಂಬಲ ಬೆಲೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುತ್ತದೆ. ಬೆಳೆ ಸಮೀಕ್ಷೆ ಕುರಿತಾದ ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ.
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.