ಉಪಯುಕ್ತ ಮಾಹಿತಿ

ಬೆಳೆ ದರ್ಶಕ್-2020ಆಪ್

25

ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ.

ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ ಬೆಳೆ ದರ್ಶಕ್ -2020 ಆಪ್ ಮೂಲಕ ಅಪ್ಲೋಡ್ ಆದ ವಿವರ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು.
ಒಂದು ವೇಳೆ ರೈತರಾಗಲಿ ಅಥವಾ ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿ ದಾಖಲಿಸಿದ್ದರೆ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಲು ಬೆಳೆ ದರ್ಶಕ್‍ನಲ್ಲಿ ಅವಕಾಶ ಕಲ್ಪಸಲಾಗಿದೆ. ಬೆಳೆ ಸಮೀಕ್ಷೆ ಪೂರ್ಣಗೊಳಿಸಲು ಸೆಪ್ಟಂಬರ್ 30 ಕೊನೆ ದಿನವಾಗಿದ್ದು, ಈಗಾಗಲೇ ಬೆಳೆ ದರ್ಶಕ್ ಆ್ಯಪ್ ಬಿಡುಗಡೆಗೊಳಿಸಿದ್ದು, ರೈತರು 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಸ್ವತಃ ಆ್ಯಪ್‍ನಲ್ಲಿ ವೀಕ್ಷಿಸಬಹುದಾಗಿದೆ.
ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಳ್ಳಲು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ದೊರೆಯುವ ಬೆಳೆ ದರ್ಶಕ್ ಆ್ಯಪ್ 2020-21 ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

http://play.google.com/store/apps/details?id=com.crop.offcsreportskharif

ಈ ಲಿಂಕ್ ಬಳಸಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದು.


ಆ್ಯಪ್‍ನ ವಿಶೇಷತೆ: ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರ ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ಜಮೀನಿನಲ್ಲಿ ತೆಗೆದ ಜಿಪಿಎಸ್ ಆಧಾರಿತ ಛಾಯಾಚಿತ್ರ ವೀಕ್ಷಿಸಬಹುದು. ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು

ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಅಂಗೀಕರಿಸಿದ್ದಾರೋ, ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದು. ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮ ಕೈಗೊಂಡಿದ್ದಾರೆ ಎಂದು ರೈತರು ತಿಳಿಯಬಹುದಾಗಿದೆ.
ಪ್ರಯೋಜನಗಳು: ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆನಷ್ಟ ಪರಿಹಾರ, ಬೆಂಬಲ ಬೆಲೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುತ್ತದೆ. ಬೆಳೆ ಸಮೀಕ್ಷೆ ಕುರಿತಾದ ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ.

source whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.