ಆರೋಗ್ಯ

ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

1535

ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

 

 

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ  ಅನೇಕ ಆರೋಗ್ಯ ಲಾಭ ಪಡೆಯಬಹುದು.

ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್:

ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.

ಚರ್ಮದ ಸೋಂಕನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ :

ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.

ಶ್ವಾಸಕೋಶದ ತೊಂದರೆಗಳನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.

ಮೆಟಬಾಲಿಸಂ ಹೆಚ್ಚಿಸುತ್ತದೆ:

ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.

ಹಲ್ಲುನೋವು :

ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ