ಆರೋಗ್ಯ

ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

1540

ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

 

 

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ  ಅನೇಕ ಆರೋಗ್ಯ ಲಾಭ ಪಡೆಯಬಹುದು.

ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್:

ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.

ಚರ್ಮದ ಸೋಂಕನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ :

ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.

ಶ್ವಾಸಕೋಶದ ತೊಂದರೆಗಳನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.

ಮೆಟಬಾಲಿಸಂ ಹೆಚ್ಚಿಸುತ್ತದೆ:

ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.

ಹಲ್ಲುನೋವು :

ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…