News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

1543

ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

 

 

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ  ಅನೇಕ ಆರೋಗ್ಯ ಲಾಭ ಪಡೆಯಬಹುದು.

ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್:

ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.

ಚರ್ಮದ ಸೋಂಕನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ :

ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.

ಶ್ವಾಸಕೋಶದ ತೊಂದರೆಗಳನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.

ಮೆಟಬಾಲಿಸಂ ಹೆಚ್ಚಿಸುತ್ತದೆ:

ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.

ಹಲ್ಲುನೋವು :

ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ಕಾನೂನು

    ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

    ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…