ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ ಅನೇಕ ಆರೋಗ್ಯ ಲಾಭ ಪಡೆಯಬಹುದು.
ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.
ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.
ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.
ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!