ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:
ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.
ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.
ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.
ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.
ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.
ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.
ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.
ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…