Health

ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

186

ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.

ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.

ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್‍ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.

ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.

ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.

ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ