Health

ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

182

ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.

ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.

ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್‍ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.

ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.

ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.

ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ತಂತ್ರಜ್ಞಾನ

    ನಿಮ್ಮ ಫೇಸ್ ಬುಕ್ ಪ್ರೊಫೈಲ್ ಫೋಟೋ ಬಗ್ಗೆ, ಇನ್ಮೇಲೆ ನೀವು ತಲೆ ಕೆಡಿಸ್ಕೋಬೇಡಿ!ಏಕೆ ಗೊತ್ತಾ….

    ಫೇಸ್‌ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.