ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.
ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.
ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.
ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.
ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.
ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…