ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.
ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.
ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.
ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.
ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.
ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…