ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.
ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.
ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.
ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.
ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.
ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.