ಆರೋಗ್ಯ

ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

805

ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…