ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.
ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.
ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.
ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.
ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.
ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.
ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’
‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’
ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.
ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.
ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.
ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’
ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.
ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….