ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.
ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.
ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.
ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.
ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.
ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.
ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’
‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’
ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.
ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.
ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.
ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’
ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.
ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…