ಸುದ್ದಿ

ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

265

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. 

ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು ಹೇಳಿರುವ ವಿಡಿಯೋವನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಇದು ಎಷ್ಟು ನಿಜವೋ ಎಂಬುದು ಇನ್ನು ತಿಳಿದುಬಂದಿಲ್ಲ.

ಜೈಷ್ ಉಗ್ರರ ಮೇಲೆ ದಾಳಿ ನಡೆಸಿದ ಬಳಿಕ ಭಾರತದ ಸೈನಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಸೇನೆ ಇಂದು ಬೆಳಗ್ಗೆ ದಾಳಿ ಮಾಡಿದೆ. ಈ ದಾಳಿಯ ವಿಚಾರ ತಿಳಿಯುತ್ತಿದ್ದಂತೆ ಭಾರತ ಪ್ರತಿದಾಳಿ ನಡೆಸುವ ವೇಳೆ ಪಾಕಿಸ್ತಾನದ ಒಂದು ವಿಮಾನ ಪತನವಾಗಿದೆ ಎಂಬ ವರದಿಗಳು ಬಂದಿವೆ.

ಪಾಕ್ ವಾಯುಸೇನೆಯನ್ನು ಹಿಮ್ಮೆಟ್ಟಿಸುವ ಸಮಯದಲ್ಲಿ ನಮ್ಮ ಮಿಗ್ ವಿಮಾನ ಪತನಗೊಂಡಿದ್ದು ಪೈಲಟ್ ನಾಪತ್ತೆಯಾಗಿದ್ದಾರೆ. ಪಾಕಿಸ್ತಾನ ಪೈಲಟ್ ನಮ್ಮ ಬಳಿ ಇದ್ದಾರೆ ಎಂದು ಹೇಳುತ್ತಿದೆ. ಈ ಮಾಹಿತಿಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….