ವ್ಯಕ್ತಿ ವಿಶೇಷಣ

ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

4303

ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..

ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.

ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.

ಆ ಬಾಲಕ ಯಾರು ಗೊತ್ತಾ?

ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-

ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!

ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…

ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!

ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-

ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸುದ್ದಿ

    ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

    ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…