ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…