ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…