ದೇವರು-ಧರ್ಮ

ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

By admin

April 06, 2018

ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ..

* ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..?

ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.

* ಯಾವಾಗ ಬೋಧಿಸಿದ..?

ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.

* ಯಾವ ದಿನ ಬೋಧಿಸಿದ..?

ಉತ್ತರ : ರವಿವಾರ.

* ಯಾವ ತಿಥಿಯಲ್ಲಿ..?

ಉತ್ತರ : ಏಕಾದಶಿಯಂದು.

* ಎಲ್ಲಿ ಬೋಧಿಸಿದ..?

ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.

* ಎಷ್ಟು ಸಮಯ ಬೋಧಿಸಿದ..?

ಉತ್ತರ : 45 ನಿಮಿಷ.

* ಅರ್ಜುನನಿಗೇಕೆ ಗೀತೆಯನ್ನು ಬೋಧಿಸಿದ..?

ಉತ್ತರ : ಕ್ಷತ್ರಿಯನಿಗೆ

ಕರ್ತವ್ಯವಾದದ್ದು ಯುದ್ಧ.. ತನ್ನ ಕರ್ತವ್ಯದಿಂದ ಅರ್ಜುನ ವಿಮುಖನಾಗಲು ಬಯಸುತ್ತಾನೆ.. ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ.. ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು ಮಾಡಲು ಹಾಗೂ ಭವಿಷ್ಯದ ಮಾನವಸಂತತಿಗೆ ಧರ್ಮಜ್ಞಾನವನ್ನು ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.

* ಭಗವದ್ಗೀತೆಯಲ್ಲಿ ಎಷ್ಟು ಅಧ್ಯಾಯಗಳಿವೆ..?

ಉತ್ತರ : ಹದಿನೆಂಟು.

* ಎಷ್ಟು ಶ್ಲೋಕಗಳಿವೆ..?

ಉತ್ತರ : 700 ಶ್ಲೋಕಗಳು.

* ಗೀತೆಯಲ್ಲಿರುವ ವಿಷಯಗಳಾವವು..?

ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..

* ಅರ್ಜುನನನ್ನು ಬಿಟ್ಟರೆ ಗೀತೆಯನ್ನು ಮತ್ತ್ಯಾರು ಕೇಳಿದ್ದಾರೆ..?

ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.

* ಅರ್ಜುನನಿಗಿಂತಲೂ ಮೊದಲು ಗೀತೆಯ ಪವಿತ್ರ ಜ್ಞಾನ ಯಾರಿಗೆ ತಿಳಿದಿತ್ತು…?

ಉತ್ತರ : ಭಗವಾನ್ ಸೂರ್ಯದೇವನಿಗೆ.

* ಭಗವದ್ಗೀತೆಯನ್ನು ಯಾವ ಧರ್ಮಗ್ರಂಥದಲ್ಲಿ ಸೇರಿಸಲಾಗಿದೆ..?

ಉತ್ತರ : ಉಪನಿಷತ್ತಿನಲ್ಲಿ.

* ಗೀತೆ ಯಾವ ಗ್ರಂಥದ ಭಾಗವಾಗಿದೆ..?

ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.

* ಭಗವದ್ಗೀತೆಯ ಇನ್ನೊಂದು ಹೆಸರು..?

ಉತ್ತರ : ಗೀತೋಪನಿಷತ್.

* ಗೀತೆಯ ಸಾರವೇನು..?

ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..

* ಭಗವದ್ಗೀತೆಯಲ್ಲಿ ಯಾರು ಎಷ್ಟು ಶ್ಲೋಕಗಳನ್ನು ಹೇಳಿದ್ದಾರೆ..?

ಉತ್ತರ : ಶ್ರೀಕೃಷ್ಣ – 574. ಅರ್ಜುನ – 85 ಧೃತರಾಷ್ಟ್ರ – 01 ಸಂಜಯ – 40

ಮನುಷ್ಯನ ಆಯಸ್ಸು ನೂರು ವರ್ಷ…

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.

ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672