ಜ್ಯೋತಿಷ್ಯ, ಭವಿಷ್ಯ

ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

141

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:07:47
ಸೂರ್ಯಾಸ್ತ18:46:28
ಹಗಲಿನ ಅವಧಿ12:38:40
ರಾತ್ರಿಯ ಅವಧಿ11:20:26
ಚಂದ್ರಾಸ್ತ18:12:49
ಚಂದ್ರೋದಯ30:22:33*

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಚರ್ತುದಶಿ
ನಕ್ಷತ್ರ : ರೇವತಿ
ಯೋಗ : ವೈಧೃತಿ
ಪ್ರಥಮ ಕರಣ : ಶಕುನಿ ಚತುಷ್ಪಾದ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ

ಮುಹೂರ್ತ

ರಾಹು ಕಾಲ17:12 – 18:46ಅಶುಭ
ಯಮಘಂಡ ಕಾಲ12:27 – 14:02ಅಶುಭ
ಗುಳಿಕ ಕಾಲ15:37 – 17:12
ಅಭಿಜಿತ್12:02 -12:52ಶುಭ
ದುರ್ಮುಹೂರ್ತ17:05 – 17:56ಅಶುಭ

ಮೇಷ:-

ನಿಮಗೆ ಬರಬೇಕಾದ ಅಥವಾ ಕಳೆದುಹೋದ ಹಣವು ಬರುವ ಸೂಚನೆ ನಿಮಗೆ.  ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು.

ವೃಷಭ:-

ನಿಮ್ಮ ವೃತ್ತಿಯಲ್ಲಿನ ಅನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು.

ಮಿಥುನ:

ನಿಮ್ಮ ಮಾತಿಗೂ ಕಾರ್ಯವೈಖರಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಕಟಕ :-

ಬೆನ್ನು ನೋವು ಅಥವಾ ಮಂಡಿನೋವು ನಿಮ್ಮನ್ನು ಭಾಧಿಸುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು.

 ಸಿಂಹ:

ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಅಸ್ತ್ರ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಸಂತಸವನ್ನುಂಟು ಮಾಡುವುದು.

ಕನ್ಯಾ :-

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆತಿಥ್ಯಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.

ತುಲಾ:

ಧರ್ಮ, ಸತ್ಯ ಹಾಗೂ ನ್ಯಾಯವನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ.

ವೃಶ್ಚಿಕ :-

ನಿಮ್ಮ ಸೇವೆಯ ರೀತಿ-ನೀತಿಗಳಿಂದ ಪ್ರಭಾವದಿಂದ ಜನರು ನಿಮ್ಮನ್ನೆ ಮುಂದಿನ ನಾಯಕನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು.

ಧನಸ್ಸು:

ಉದ್ಯೋಗಧ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ದೊಡ್ಡ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ.

ಮಕರ :-

ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ಸರಿಯಲ್ಲ. ಹಣವನ್ನು ಆದಷ್ಟು ಮಟ್ಟಿಗೆ ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ಕುಂಭ:-

ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತ್ರಪ್ತಿಪಡಿಸಿ. ಹಣಖಾಸಿನ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಮೀನ:-

ನೀವು ಸರ್ಕಾರಿ ಉದ್ಯೋಗದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸರ್ಕಾರಿ ಯೋಜನೆಗಳು

    ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

    ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…