ಜ್ಯೋತಿಷ್ಯ

ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನ್ ಹೇಳುತ್ತೆ ನೋಡಿ…

434

ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಹೋದ್ಯೋಗಿಗಳೊಂದಿಗೆ ವಿನಾಕಾರಣ ಮನಸ್ತಾಪ. ಕೃಷಿಯಲ್ಲಿ ಅಲ್ಪ ಲಾಭ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ,ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು. ಅನ್ಯರಿಂದ ಸಹಾಯ ಪ್ರಾಪ್ತಿ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಂದ ಸಂಪೂರ್ಣ ಸಹಕಾರ. ವಿಶೇಷ ವಸ್ತುಗಳ ಖರೀದಿಯ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವಿರಿ. ಗುರು ಹಿರಿಯರಲ್ಲಿ ಭಕ್ತಿ.ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ

ವೃಷಭ:-

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣಲಿದ್ದೀರಿ. ನೀವು ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳುತ್ತೀರಿ. ವಿವಾಹ ಯೋಗ, ವ್ಯಾಪಾರ ವ್ಯವಹಾರದಲ್ಲಿ ಲಾಭ. ರಾಜಕೀಯದಿಂದ ದೂರವಿರುವುದು ಸೂಕ್ತ. ಕೆಲಸ ಕಾರ್ಯಗಳಲ್ಲಿ ಸಹೋದರರಿಂದ ಸಹಕಾರ. ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಮಿಥುನ:

ಶ್ರದ್ಧೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು.ನಿಮ್ಮ ಧನಾತ್ಮಕ ಚಿಂತನೆ ನಿಮಗೆ ಅಪಾರ ಸಹಾಯವನ್ನೂ ಮಾಡುತ್ತದೆ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಪಡಿಸುತ್ತವೆ – ನೀವು ಇತರರಿಗೆ ಹೆಚ್ಚು ಮತ್ತು ನಿಮಗಾಗಿ ಕಡಿಮೆ ಮಾಡಿಕೊಳ್ಳುತ್ತೀರಿ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ರಾಜಕಾರಣಿಗಳಿಗೆ ಉತ್ತಮ, ಆರೋಗ್ಯದಲ್ಲಿ ಏರುಪೇರು, ಬಹುಕಾಲದ ಬಯಕೆಗಳು ಈಡೇರುವ ಸಾಧ್ಯತೆ ಕಂಡುಬರುತ್ತಿದೆ. ದೂರದ ಪ್ರಯಾಣವೊಂದಕ್ಕೆ ಸಂಕಲ್ಪ ಮಾಡಲಿದ್ದೀರಿ.

ಕಟಕ :-

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಮನೆಯಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ. ಆಸ್ತಿ ಖರೀದಿ ವ್ಯವಹಾರ ಮುಂದೂಡಿ. ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ವೃತ್ತಿಯಲ್ಲಿ ಅಮಿತವಾದ ಒತ್ತಡ ಉಂಟಾಗಲಿದ್ದು ತಾಳ್ಮೆಯಿಂದ ವ್ಯವಹರಿಸುವುದು ಸೂಕ್ತ. ಬಂಧುಗಳಿಂದ ಸಕಾಲಿಕ ಸಲಹೆ ನೆರವು.

 ಸಿಂಹ:

ಸಾಮಾಜಿಕ ಸೇವೆಯಿಂದಾಗಿ ಸಮಾಜದ ಋಣ ತೀರಿಸಲಿದ್ದೀರಿ. ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವ್ಯವಹಾರದಲ್ಲಿ ಸೋದರರಿಂದ ಸಹಕಾರ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ದಾಂಪತ್ಯ ಜೀವನವು ಸುಖಮಯ. ಆಕಸ್ಮಿಕ ಪ್ರಯಾಣವೊಂದು ನಿರ್ಧರಿಸಲ್ಪಡಬಹುದು. ಮನೆಯಲ್ಲಿ ಸಂತಸ. ಶ್ರಮಕ್ಕೆ ತಕ್ಕ ಫಲ, ವಿಪರೀತ ಕೋಪ, ಮಿತ್ರರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ಕನ್ಯಾ :-

ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಚರ್ಚೆ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಂತ್ರೋಪಕರಣಗಳ ಖರೀದಿ, ರಿಪೇರಿಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಅಕಾಲ ಭೋಜನ, ಸ್ತ್ರೀಯರಿಗೆ ಅನುಕೂಲ, ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಆತ್ಮೀಯರ ಆಗಮನ. ಪ್ರತಿಭಾವಂತ ಮಹಿಳೆಯರಿಗೆ ಪ್ರೋತ್ಸಾಹ ದೊರಕಲಿದೆ. ದಾಯಾದಿಗಳ ಕಲಹ, ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಂಬಿದ ಜನರಿಂದ ಮೋಸ,

ತುಲಾ:

ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.ಕುಟುಂಬದವರೊಂದಿಗೆ ಧಾರ್ಮಿಕ ಕ್ಷೇತ್ರ ದರ್ಶನ.ಹೊಸ ಯೋಜನೆಗಳ ಮಾತುಕತೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ.ವ್ಯವಹಾರಗಳಲ್ಲಿ ಮೋಸ,  ಮಹಿಳೆಯರಿಗೆ ಮಾನಸಿಕ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.

ವೃಶ್ಚಿಕ :-

ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗುವವು. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,. ವ್ಯಾಪಾರೋದ್ಯಮದಲ್ಲಿ ಎಚ್ಚರಿಕೆ ಅಗತ್ಯ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು.ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಮಹಿಳೆಯರಿಗೆ ಶುಭ

ಧನಸ್ಸು:

ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೆಲಸದ ಒತ್ತಡದಿಂದಾಗಿ ಮಾನಸಿಕ ಹಿಡಿತ ತಪ್ಪದಂತೆ ತಾಳ್ಮೆ ಅಗತ್ಯ.ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ. ರಾಜಕೀಯದಲ್ಲಿ ಯಶಸ್ಸು.  ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನ್ಯಾಯಾಲಯದಲ್ಲಿನ ಕಟ್ಲೆಗಳು ಅನುಕೂಲಕರವಾಗಲಿದೆ.

ಮಕರ :-

ಬಹುದಿನಗಳ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ.ಸ್ತ್ರೀಯರಿಗೆ ಲಾಭ, ಬಂಧುಗಳಲ್ಲಿ ವಿಶ್ವಾಸ, ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ, ವಿಶ್ರಾಂತಿ ಪಡೆಯುವಿರಿ, ಹಿರಿಯರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಸೋದರರಿಂದ ಸಹಕಾರ ದೊರೆಯುವುದರ ಜೊತೆಗೆ ಸಾಮಾಜಿಕ ಗೌರವಾದರಗಳು.ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.

ಕುಂಭ:-

ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ.ಉದ್ಯೋಗದಲ್ಲಿರುವವರಿಗೆ ವರ್ಗಾವಣೆ, ಬಡ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಮಹಿಳೆಯರಿಗೆ ಬೆಂಕಿ ಮತ್ತು ಆಯುಧಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬರವಣಿಗೆಯಿಂದ ಕೀರ್ತಿಲಾಭ. ಇಂದು ನಿಮ್ಮ ವೈವಾಹಿಕ ಜೀವನದ ಆಕರ್ಷಣೆ ಕಳೆದುಹೋಗಿದೆ ಎಂದು ನೀವು ಭಾವಿಸಬಹುದು; ಆದರೂ ಎಲ್ಲವೂ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಅಪವಾದಗಳು ದೂರವಾಗುತ್ತದೆ.

ಮೀನ:-

ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು ಅಪರೂಪದ ವ್ಯಕ್ತಿಯ ಭೇಟಿ,.ನಿರೀಕ್ಷಿತ ಮೂಲಗಳಿಂದ ಧನಾಗಮನ. ಹಿರಿಯರ ಮಾತುಗಳಿಂದ ವ್ಯವಹಾರಗಳಲ್ಲಿ ಅನುಕೂಲವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರ ದರ್ಶನ ಭಾಗ್ಯ, ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು. ಶುಭ ಸಮಾರಂಭಗಳಲ್ಲಿ ಭಾಗಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ಉದ್ಯೋಗ ಪ್ರಾಪ್ತಿ, ಮನೆಯಲ್ಲಿ ಸಂತಸ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ಆರೋಗ್ಯ

    ಹಲ್ಲು ಹಳದಿಗಟ್ಟಿದೆಯೇ? ಬಾಯ್ತುಂಬಾ ನಗಲೂ ನಾಚಿಕೆಯಾಗುತ್ತಿದೆಯೇ? ಹಾಗಾದ್ರೆ ಕೆಲವು ಸಿಂಪಲ್ ಮನೆ ಮದ್ದು ಮಾಡೊದು ಹೇಗೆ ಎಂದು ತಿಳಿಯಲು ಈ ಲೇಖನ ಓದಿ…

    ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…