ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಾಣಿ ಹಿಂಸೆ ಪ್ರಕರಣದಲ್ಲಿ ಎರಡು ಬಾರಿ ಜಾಮೀನು ನಿರಾಕರಣೆಯಾಗಿರುವುದು ಭಾರತದಲ್ಲಿ ಇದೇ ಮೊದಲು ಎಂದು ವರದಿಯಾಗಿದೆ.
ಪ್ರಾಣಿಗಳ ಮೇಲೆ ಕ್ರೌರ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿರುವುದು ಕೂಡ ಭಾರತದಲ್ಲಿ ಇದೇ ಮೊದಲು ಎಂದು ಪೇಟಾದ ಎಮರ್ಜೆನ್ಸಿ ರೆಸ್ಪಾನ್ಸ್ ಕೋ-ಆರ್ಡಿನೇಟರ್ ಮೀಟ್ ಆಶರ್ ಹೇಳಿದ್ದಾರೆ.
ಕೊಲೆ ಪ್ರಕರಣಗಳಲ್ಲಿಯೂ ಕೂಡ ಸಾಮಾನ್ಯವಾಗಿ ಆರೋಪಿಗಳಿಗೆ 2-3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗುತ್ತದೆ. ಆದರೆ ಈ ಕೇಸಿನಲ್ಲಿ 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವುದು ನಮಗೆ ಆಶ್ಚರ್ಯವಾಗಿದ್ದು, ವಕೀಲರಿಗೂ ಅಚ್ಚರಿಯಾಗಿದೆ ಎಂದು ತಿಳಿಸಿದರು.
ಸಾಮಾನ್ಯವಾಗಿ ಪ್ರಾಣಿ ಹಿಂಸೆ ಪ್ರಕರಣದಲ್ಲಿ ಆರೋಪಿ ಮೊದಲ ವಿಚಾರಣೆಯಲ್ಲಿ ಜಾಮೀನು ಪಡೆದು ಹೊರಬರುತ್ತಾರೆ. ಆದ್ರೆ ಈ ಪ್ರಕರಣ ಕೆಲವು ಅಂಶಗಳಿಂದ ಭಿನ್ನವಾಗಿದೆ. ಈ ಪ್ರಕರಣದಲ್ಲಿ ಪ್ರಾಣಿ ಯಾವುದೇ ಪ್ರಚೋದನೆ ಮಾಡದಿದ್ದರೂ ಅದನ್ನ ಹೊಡೆದು ಕೊಲ್ಲಲಾಗಿದೆ. ನಂತರವೂ ಅದಕ್ಕೆ ಹಿಂಸಿಸಲಾಗಿದೆ.
ಅಮಾನುಷವಾಗಿ ಮರಕ್ಕೆ ಕಟ್ಟಿ ಕೋತಿಯನ್ನು ಹೊಡೆದು ಕೊಂದ 23 ವರ್ಷದ ಯುವಕ ಸೇರಿದಂತೆ ಇಬ್ಬರು ಅಪ್ರಾಪ್ತರನ್ನು ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಪೊಲೀಸರು ಬಂಧಿಸಿದ್ದರು.ತೋಟಕ್ಕೆ ಬಂದಿದ್ದ ಕೋತಿಯನ್ನ ಮರಕ್ಕೆ ಹಗ್ಗದಿಂದ ಉಲ್ಟಾ ನೇತು ಹಾಕಿ ಮನಬಂದಂತೆ ಹೊಡೆದಿರೋದನ್ನ ವಿಡಿಯೋ ಮಾಡಿದ್ದರು.
ನಂತರ ಕೋತಿಯನ್ನ ಕೆಳಗಿಳಿಸಿ ಕೋಲಿನಿಂದ ಹೊಡೆದಿದ್ದು, ಏಟನ್ನ ಸಹಿಸಲಾಗದೇ ವಿಲವಿಲ ಒದ್ದಾಡಿ ಕೋತಿ ಪ್ರಾಣ ಬಿಟ್ಟಿತ್ತು. ಬಳಿಕ ವಿಡಿಯೋ ಮೂಲಕ ಅರಣ್ಯ ಅಧಿಕಾರಿಗಳು ಆರೋಪಿಗಳನ್ನ ಪತ್ತೆಹಚ್ಚಿ ಬಂಧಿಸಿದ್ದರು.
ಅರಣ್ಯ ಅಧಿಕಾರಿಗಳು ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9ರಡಿ ದೂರು ದಾಖಲಿಸಿಕೊಂಡಿದ್ದರು. ಆರೋಪಿಯನ್ನ ಸ್ಥಳಿಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಆರೋಪಿಯ ದುಷ್ಕೃತ್ಯದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಆದ್ದರಿಂದ ಈ ಪ್ರಕರಣ ಬಗ್ಗೆ ಹೆಚ್ಚು ಗಮನ ಹರಿಸಲಾಗಿದೆ.
ಆರೋಪಿಯ ಮೊದಲ ಜಾಮೀನು ನಿರಾಕರಿಸಿದ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯ್ತು. ಮತ್ತೆ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಎರಡನೇ ಬಾರಿಯೂ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.