News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

34

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ 60 ಟನ್‌ಗಳಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇದು ಕಳೆದ ವರ್ಷದಿಗಿಂತ ಸುಮಾರು 10% ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಆಮದು ಸುಂಕ ಹೆಚ್ಚಳವೇ ಇದರ ಪ್ರಮುಖ ಕಾರಣ ಎಂದು ತಜ್ಞರು ಹೇಳಿದ್ದಾರೆ.

ಭಾರತವು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಚಿನ್ನ ಬಳಕೆದಾರ ರಾಷ್ಟ್ರವಾಗಿದೆ. ದೇಶದಲ್ಲಿ ಬಳಕೆಯಾಗುವ ಬಹುತೇಕ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತವು ಸುಮಾರು 720 ಟನ್ ಚಿನ್ನವನ್ನು ಆಮದು ಮಾಡಿಕೊಂಡಿದ್ದು, ಇದಕ್ಕಾಗಿ ಸುಮಾರು 72 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ವೆಚ್ಚವಾಗಿದೆ. ಈ ಹೆಚ್ಚುತ್ತಿರುವ ಆಮದು ವೆಚ್ಚ ಮತ್ತು ರೂಪಾಯಿ ಮೌಲ್ಯದ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಸುಂಕ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ.

ಚಿನ್ನದ ಬೆಲೆ ಈಗಾಗಲೇ ದಾಖಲೆಯ ಮಟ್ಟ ತಲುಪಿರುವ ಸಂದರ್ಭದಲ್ಲಿ ಆಮದು ಸುಂಕ ಏರಿಕೆಯ ಪರಿಣಾಮ ಗ್ರಾಹಕರಿಗೆ ಮತ್ತಷ್ಟು ಬೆಲೆಭಾರವಾಗಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಚಿನ್ನ ಖರೀದಿಯನ್ನು ಮುಂದೂಡುತ್ತಿದ್ದಾರೆ. ವಿಶೇಷವಾಗಿ ಮದುವೆ ಹಾಗೂ ಹಬ್ಬದ ಸೀಸನ್ ಹೊರತಾಗಿ ಜುವೆಲ್ಲರಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಕ್ರಿಸಿಲ್ ರೇಟಿಂಗ್ಸ್ ವರದಿ ಪ್ರಕಾರ, ಸಂಘಟಿತ ಜುವೆಲ್ಲರಿ ವಲಯದಲ್ಲಿ 2026-27 ಹಣಕಾಸು ವರ್ಷದಲ್ಲಿ ಮಾರಾಟದ ಪ್ರಮಾಣವು 13%ರಿಂದ 15%ರವರೆಗೆ ಕುಸಿಯುವ ಸಾಧ್ಯತೆ ಇದೆ. ಇದು ಕಳೆದ ಹತ್ತು ವರ್ಷಗಳಲ್ಲೇ ಅತೀ ಕಡಿಮೆ ಮಟ್ಟವಾಗಬಹುದು ಎಂದು ಎಚ್ಚರಿಸಲಾಗಿದೆ. ಆದರೆ ಚಿನ್ನದ ಬೆಲೆ ಗಗನಕ್ಕೇರಿರುವ ಕಾರಣ, ಮಾರಾಟ ಪ್ರಮಾಣ ಕಡಿಮೆಯಾದರೂ ಒಟ್ಟಾರೆ ಆದಾಯವು 20%ರಿಂದ 25%ರವರೆಗೆ ಏರಿಕೆಯಾಗಬಹುದು ಎಂದು ವರದಿ ತಿಳಿಸಿದೆ.

ಚಿನ್ನದ ಬೆಲೆ ಏರಿಕೆಯಿಂದ ಜನರು ಈಗ ಕಡಿಮೆ ಕ್ಯಾರೆಟ್‌ನ ಆಭರಣಗಳು, ಲೈಟ್‌ವೇಟ್ ಜುವೆಲ್ಲರಿ ಮತ್ತು ಸ್ಟಡಡ್ ಆಭರಣಗಳತ್ತ ಮುಖ ಮಾಡುತ್ತಿದ್ದಾರೆ. ಕೆಲವರು ಹೂಡಿಕೆ ಉದ್ದೇಶಕ್ಕಾಗಿ ಚಿನ್ನದ ಬಾರ್ ಹಾಗೂ ನಾಣ್ಯಗಳನ್ನು ಖರೀದಿಸುತ್ತಿದ್ದರೂ, ಒಟ್ಟಾರೆ ಬೇಡಿಕೆಯಲ್ಲಿ ಕುಸಿತ ಕಂಡುಬರುತ್ತಿದೆ.

ಇನ್ನೊಂದೆಡೆ, ಸುಂಕ ಹೆಚ್ಚಳದಿಂದ ಅಕ್ರಮ ಚಿನ್ನ ಸಾಗಣೆ ಮತ್ತೆ ಹೆಚ್ಚಾಗುವ ಭೀತಿ ಕೂಡ ಎದುರಾಗಿದೆ. WGC ಪ್ರಕಾರ, ಹಿಂದಿನ ವರ್ಷಗಳಲ್ಲಿಯೂ ಆಮದು ಸುಂಕ ಹೆಚ್ಚಿಸಿದಾಗ ಅಕ್ರಮ ಚಿನ್ನದ ಆಮದು ಗಣನೀಯವಾಗಿ ಏರಿಕೆಯಾಗಿದೆ. 2024ರಲ್ಲಿ ಸುಂಕ ಕಡಿತಗೊಂಡ ಬಳಿಕ ಕಳ್ಳಸಾಗಣೆ ಇಳಿಕೆಯಾಗಿದ್ದರೂ, ಈಗ ಮತ್ತೆ ಅದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆ ಇದೆ ಎಂದು ವರದಿಗಳು ಸೂಚಿಸುತ್ತಿವೆ.

ಒಟ್ಟಿನಲ್ಲಿ, ಸರ್ಕಾರದ ಆಮದು ಸುಂಕ ಹೆಚ್ಚಳ ಕ್ರಮದಿಂದ ದೇಶದ ವಿದೇಶಿ ವಿನಿಮಯ ಉಳಿಸುವ ಉದ್ದೇಶವಿದ್ದರೂ, ಇದರ ನೇರ ಪರಿಣಾಮ ಚಿನ್ನದ ವ್ಯಾಪಾರ ಮತ್ತು ಗ್ರಾಹಕರ ಖರೀದಿ ಮನೋಭಾವದ ಮೇಲೆ ಬೀಳುತ್ತಿದೆ. ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ, ಮದುವೆ ಸೀಸನ್ ಮತ್ತು ಮಾರುಕಟ್ಟೆ ಪರಿಸ್ಥಿತಿ ಯಾವ ರೀತಿಯಲ್ಲಿ ಬದಲಾಗುತ್ತದೆಯೋ ಅದರ ಮೇಲೆ ಬೇಡಿಕೆಯ ದಿಕ್ಕು ನಿರ್ಧಾರವಾಗಲಿದೆ.

About the author / 

Harsha S K

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….