ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ 60 ಟನ್ಗಳಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇದು ಕಳೆದ ವರ್ಷದಿಗಿಂತ ಸುಮಾರು 10% ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಆಮದು ಸುಂಕ ಹೆಚ್ಚಳವೇ ಇದರ ಪ್ರಮುಖ ಕಾರಣ ಎಂದು ತಜ್ಞರು ಹೇಳಿದ್ದಾರೆ.
ಭಾರತವು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಚಿನ್ನ ಬಳಕೆದಾರ ರಾಷ್ಟ್ರವಾಗಿದೆ. ದೇಶದಲ್ಲಿ ಬಳಕೆಯಾಗುವ ಬಹುತೇಕ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತವು ಸುಮಾರು 720 ಟನ್ ಚಿನ್ನವನ್ನು ಆಮದು ಮಾಡಿಕೊಂಡಿದ್ದು, ಇದಕ್ಕಾಗಿ ಸುಮಾರು 72 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ವೆಚ್ಚವಾಗಿದೆ. ಈ ಹೆಚ್ಚುತ್ತಿರುವ ಆಮದು ವೆಚ್ಚ ಮತ್ತು ರೂಪಾಯಿ ಮೌಲ್ಯದ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಸುಂಕ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ.
ಚಿನ್ನದ ಬೆಲೆ ಈಗಾಗಲೇ ದಾಖಲೆಯ ಮಟ್ಟ ತಲುಪಿರುವ ಸಂದರ್ಭದಲ್ಲಿ ಆಮದು ಸುಂಕ ಏರಿಕೆಯ ಪರಿಣಾಮ ಗ್ರಾಹಕರಿಗೆ ಮತ್ತಷ್ಟು ಬೆಲೆಭಾರವಾಗಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಚಿನ್ನ ಖರೀದಿಯನ್ನು ಮುಂದೂಡುತ್ತಿದ್ದಾರೆ. ವಿಶೇಷವಾಗಿ ಮದುವೆ ಹಾಗೂ ಹಬ್ಬದ ಸೀಸನ್ ಹೊರತಾಗಿ ಜುವೆಲ್ಲರಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಕ್ರಿಸಿಲ್ ರೇಟಿಂಗ್ಸ್ ವರದಿ ಪ್ರಕಾರ, ಸಂಘಟಿತ ಜುವೆಲ್ಲರಿ ವಲಯದಲ್ಲಿ 2026-27 ಹಣಕಾಸು ವರ್ಷದಲ್ಲಿ ಮಾರಾಟದ ಪ್ರಮಾಣವು 13%ರಿಂದ 15%ರವರೆಗೆ ಕುಸಿಯುವ ಸಾಧ್ಯತೆ ಇದೆ. ಇದು ಕಳೆದ ಹತ್ತು ವರ್ಷಗಳಲ್ಲೇ ಅತೀ ಕಡಿಮೆ ಮಟ್ಟವಾಗಬಹುದು ಎಂದು ಎಚ್ಚರಿಸಲಾಗಿದೆ. ಆದರೆ ಚಿನ್ನದ ಬೆಲೆ ಗಗನಕ್ಕೇರಿರುವ ಕಾರಣ, ಮಾರಾಟ ಪ್ರಮಾಣ ಕಡಿಮೆಯಾದರೂ ಒಟ್ಟಾರೆ ಆದಾಯವು 20%ರಿಂದ 25%ರವರೆಗೆ ಏರಿಕೆಯಾಗಬಹುದು ಎಂದು ವರದಿ ತಿಳಿಸಿದೆ.
ಚಿನ್ನದ ಬೆಲೆ ಏರಿಕೆಯಿಂದ ಜನರು ಈಗ ಕಡಿಮೆ ಕ್ಯಾರೆಟ್ನ ಆಭರಣಗಳು, ಲೈಟ್ವೇಟ್ ಜುವೆಲ್ಲರಿ ಮತ್ತು ಸ್ಟಡಡ್ ಆಭರಣಗಳತ್ತ ಮುಖ ಮಾಡುತ್ತಿದ್ದಾರೆ. ಕೆಲವರು ಹೂಡಿಕೆ ಉದ್ದೇಶಕ್ಕಾಗಿ ಚಿನ್ನದ ಬಾರ್ ಹಾಗೂ ನಾಣ್ಯಗಳನ್ನು ಖರೀದಿಸುತ್ತಿದ್ದರೂ, ಒಟ್ಟಾರೆ ಬೇಡಿಕೆಯಲ್ಲಿ ಕುಸಿತ ಕಂಡುಬರುತ್ತಿದೆ.

ಇನ್ನೊಂದೆಡೆ, ಸುಂಕ ಹೆಚ್ಚಳದಿಂದ ಅಕ್ರಮ ಚಿನ್ನ ಸಾಗಣೆ ಮತ್ತೆ ಹೆಚ್ಚಾಗುವ ಭೀತಿ ಕೂಡ ಎದುರಾಗಿದೆ. WGC ಪ್ರಕಾರ, ಹಿಂದಿನ ವರ್ಷಗಳಲ್ಲಿಯೂ ಆಮದು ಸುಂಕ ಹೆಚ್ಚಿಸಿದಾಗ ಅಕ್ರಮ ಚಿನ್ನದ ಆಮದು ಗಣನೀಯವಾಗಿ ಏರಿಕೆಯಾಗಿದೆ. 2024ರಲ್ಲಿ ಸುಂಕ ಕಡಿತಗೊಂಡ ಬಳಿಕ ಕಳ್ಳಸಾಗಣೆ ಇಳಿಕೆಯಾಗಿದ್ದರೂ, ಈಗ ಮತ್ತೆ ಅದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆ ಇದೆ ಎಂದು ವರದಿಗಳು ಸೂಚಿಸುತ್ತಿವೆ.
ಒಟ್ಟಿನಲ್ಲಿ, ಸರ್ಕಾರದ ಆಮದು ಸುಂಕ ಹೆಚ್ಚಳ ಕ್ರಮದಿಂದ ದೇಶದ ವಿದೇಶಿ ವಿನಿಮಯ ಉಳಿಸುವ ಉದ್ದೇಶವಿದ್ದರೂ, ಇದರ ನೇರ ಪರಿಣಾಮ ಚಿನ್ನದ ವ್ಯಾಪಾರ ಮತ್ತು ಗ್ರಾಹಕರ ಖರೀದಿ ಮನೋಭಾವದ ಮೇಲೆ ಬೀಳುತ್ತಿದೆ. ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ, ಮದುವೆ ಸೀಸನ್ ಮತ್ತು ಮಾರುಕಟ್ಟೆ ಪರಿಸ್ಥಿತಿ ಯಾವ ರೀತಿಯಲ್ಲಿ ಬದಲಾಗುತ್ತದೆಯೋ ಅದರ ಮೇಲೆ ಬೇಡಿಕೆಯ ದಿಕ್ಕು ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.