ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ 60 ಟನ್ಗಳಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇದು ಕಳೆದ ವರ್ಷದಿಗಿಂತ ಸುಮಾರು 10% ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಆಮದು ಸುಂಕ ಹೆಚ್ಚಳವೇ ಇದರ ಪ್ರಮುಖ ಕಾರಣ ಎಂದು ತಜ್ಞರು ಹೇಳಿದ್ದಾರೆ.
ಭಾರತವು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಚಿನ್ನ ಬಳಕೆದಾರ ರಾಷ್ಟ್ರವಾಗಿದೆ. ದೇಶದಲ್ಲಿ ಬಳಕೆಯಾಗುವ ಬಹುತೇಕ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತವು ಸುಮಾರು 720 ಟನ್ ಚಿನ್ನವನ್ನು ಆಮದು ಮಾಡಿಕೊಂಡಿದ್ದು, ಇದಕ್ಕಾಗಿ ಸುಮಾರು 72 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ವೆಚ್ಚವಾಗಿದೆ. ಈ ಹೆಚ್ಚುತ್ತಿರುವ ಆಮದು ವೆಚ್ಚ ಮತ್ತು ರೂಪಾಯಿ ಮೌಲ್ಯದ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಸುಂಕ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ.
ಚಿನ್ನದ ಬೆಲೆ ಈಗಾಗಲೇ ದಾಖಲೆಯ ಮಟ್ಟ ತಲುಪಿರುವ ಸಂದರ್ಭದಲ್ಲಿ ಆಮದು ಸುಂಕ ಏರಿಕೆಯ ಪರಿಣಾಮ ಗ್ರಾಹಕರಿಗೆ ಮತ್ತಷ್ಟು ಬೆಲೆಭಾರವಾಗಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಚಿನ್ನ ಖರೀದಿಯನ್ನು ಮುಂದೂಡುತ್ತಿದ್ದಾರೆ. ವಿಶೇಷವಾಗಿ ಮದುವೆ ಹಾಗೂ ಹಬ್ಬದ ಸೀಸನ್ ಹೊರತಾಗಿ ಜುವೆಲ್ಲರಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಕ್ರಿಸಿಲ್ ರೇಟಿಂಗ್ಸ್ ವರದಿ ಪ್ರಕಾರ, ಸಂಘಟಿತ ಜುವೆಲ್ಲರಿ ವಲಯದಲ್ಲಿ 2026-27 ಹಣಕಾಸು ವರ್ಷದಲ್ಲಿ ಮಾರಾಟದ ಪ್ರಮಾಣವು 13%ರಿಂದ 15%ರವರೆಗೆ ಕುಸಿಯುವ ಸಾಧ್ಯತೆ ಇದೆ. ಇದು ಕಳೆದ ಹತ್ತು ವರ್ಷಗಳಲ್ಲೇ ಅತೀ ಕಡಿಮೆ ಮಟ್ಟವಾಗಬಹುದು ಎಂದು ಎಚ್ಚರಿಸಲಾಗಿದೆ. ಆದರೆ ಚಿನ್ನದ ಬೆಲೆ ಗಗನಕ್ಕೇರಿರುವ ಕಾರಣ, ಮಾರಾಟ ಪ್ರಮಾಣ ಕಡಿಮೆಯಾದರೂ ಒಟ್ಟಾರೆ ಆದಾಯವು 20%ರಿಂದ 25%ರವರೆಗೆ ಏರಿಕೆಯಾಗಬಹುದು ಎಂದು ವರದಿ ತಿಳಿಸಿದೆ.
ಚಿನ್ನದ ಬೆಲೆ ಏರಿಕೆಯಿಂದ ಜನರು ಈಗ ಕಡಿಮೆ ಕ್ಯಾರೆಟ್ನ ಆಭರಣಗಳು, ಲೈಟ್ವೇಟ್ ಜುವೆಲ್ಲರಿ ಮತ್ತು ಸ್ಟಡಡ್ ಆಭರಣಗಳತ್ತ ಮುಖ ಮಾಡುತ್ತಿದ್ದಾರೆ. ಕೆಲವರು ಹೂಡಿಕೆ ಉದ್ದೇಶಕ್ಕಾಗಿ ಚಿನ್ನದ ಬಾರ್ ಹಾಗೂ ನಾಣ್ಯಗಳನ್ನು ಖರೀದಿಸುತ್ತಿದ್ದರೂ, ಒಟ್ಟಾರೆ ಬೇಡಿಕೆಯಲ್ಲಿ ಕುಸಿತ ಕಂಡುಬರುತ್ತಿದೆ.

ಇನ್ನೊಂದೆಡೆ, ಸುಂಕ ಹೆಚ್ಚಳದಿಂದ ಅಕ್ರಮ ಚಿನ್ನ ಸಾಗಣೆ ಮತ್ತೆ ಹೆಚ್ಚಾಗುವ ಭೀತಿ ಕೂಡ ಎದುರಾಗಿದೆ. WGC ಪ್ರಕಾರ, ಹಿಂದಿನ ವರ್ಷಗಳಲ್ಲಿಯೂ ಆಮದು ಸುಂಕ ಹೆಚ್ಚಿಸಿದಾಗ ಅಕ್ರಮ ಚಿನ್ನದ ಆಮದು ಗಣನೀಯವಾಗಿ ಏರಿಕೆಯಾಗಿದೆ. 2024ರಲ್ಲಿ ಸುಂಕ ಕಡಿತಗೊಂಡ ಬಳಿಕ ಕಳ್ಳಸಾಗಣೆ ಇಳಿಕೆಯಾಗಿದ್ದರೂ, ಈಗ ಮತ್ತೆ ಅದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆ ಇದೆ ಎಂದು ವರದಿಗಳು ಸೂಚಿಸುತ್ತಿವೆ.
ಒಟ್ಟಿನಲ್ಲಿ, ಸರ್ಕಾರದ ಆಮದು ಸುಂಕ ಹೆಚ್ಚಳ ಕ್ರಮದಿಂದ ದೇಶದ ವಿದೇಶಿ ವಿನಿಮಯ ಉಳಿಸುವ ಉದ್ದೇಶವಿದ್ದರೂ, ಇದರ ನೇರ ಪರಿಣಾಮ ಚಿನ್ನದ ವ್ಯಾಪಾರ ಮತ್ತು ಗ್ರಾಹಕರ ಖರೀದಿ ಮನೋಭಾವದ ಮೇಲೆ ಬೀಳುತ್ತಿದೆ. ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ, ಮದುವೆ ಸೀಸನ್ ಮತ್ತು ಮಾರುಕಟ್ಟೆ ಪರಿಸ್ಥಿತಿ ಯಾವ ರೀತಿಯಲ್ಲಿ ಬದಲಾಗುತ್ತದೆಯೋ ಅದರ ಮೇಲೆ ಬೇಡಿಕೆಯ ದಿಕ್ಕು ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…