ಉಪಯುಕ್ತ ಮಾಹಿತಿ

ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

623

ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು  ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್‌ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು  ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್‌ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್‌ನೆಸ್ ಉದ್ಯಮದ ಆರ‍್ಡಿ, ಟ್ರಾನ್ಸ್‌ವ್ಯೂ ಎಂಟರ‍್ಪ್ರೈಸ್‌ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.

 

ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್‌ಗಳು, ಪ್ರೊಟೀನ್, ವಿಟಮಿನ್‌ಗಳು ಮತ್ತು ಮಿನರಲ್‌ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ‍್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.

ಈ ಕುರಿತು ಶೀಲಾ ಕೃಷ್ಣಸ್ವಾಮಿ  ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.