ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…