ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.