ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.
ಕೃಪೆ: ಸುದರ್ಶನ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…