ದೇಶ-ವಿದೇಶ

“ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

322

ಹೌದು, ಪತ್ರಿಕೆಯೊಂದು ವರದಿ ಮಾಡಿರುವಂತೆ, ಪ್ರಸ್ತುತ ಭಾರತೀಯ ಸೇನೆಗೆ ಅಮೆರಿಕದಿಂದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಇದೀಗ ಈ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಇನ್ನು ಮುಂದೆ ಭಾರತದಲ್ಲೇ ತಯಾರಿಸಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ ಸ್ವದೇಶಿ ‘ಬುಲೆಟ್‌ಪ್ರೂಫ್‌’ ಜಾಕೆಟ್‌ವೊಂದನ್ನು ಅಭಿವೃದ್ಧಿಪಡಿಸಿದ್ದಾರೆ.

 

ಇದರ ಬಳಕೆಗೆ ರಕ್ಷಣಾ ಸಚಿವಾಲಯದ ಉನ್ನತಾಧಿಕಾರ ಸಮಿತಿ ಕೂಡ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್‌ಪ್ರೂಫ್‌ ಜಾಕೆಟ್‌ ಅನ್ನು ಧರಿಸಲು ದಾರಿ ಸುಗಮವಾಗಿದೆ.

ಕೇಂದ್ರ ಸರ್ಕಾರಕ್ಕೆ ಹೇಗೆ ಉಳಿತಾಯ ?

ಇನ್ನು ಈ ಬುಲೆಟ್ ಪ್ರೂಫ್ ಜಾಕೆಟ್ ಗಳು ಕಡಿಮೆ ವೆಚ್ಚದ್ದಾಗಿದ್ದು, ಒಂದು ಜಾಕೆಟ್ ನಿರ್ಮಾಣಕ್ಕೆ ಕೇವಲ 50 ಸಾವಿರ ರು. ವೆಚ್ಚ ತಗುಲುತ್ತದೆ. ಆದರೆ ಅಮೆರಿಕದ ಜಾಕೆಟ್ ಗಳಿಗೆ 1.50 ಲಕ್ಷ ರು. ವೆಚ್ಚವಾಗುತ್ತಿದೆ. ಜತೆಗೆ ಒಂದು ಕವಚ 15ರಿಂದ 18 ಕೆ.ಜಿ.ವರೆಗೂ ತೂಕವಿದೆ. ಇಷ್ಟು ಮಣ ಭಾರದ ಜಾಕೆಟ್‌ ಧರಿಸಿ ಉಗ್ರರ ಜತೆ ಕಾದಾಡಬೇಕಾದ ಪರಿಸ್ಥಿತಿ ಯೋಧರಿಗಿದೆ.

ಇದನ್ನು ಮನಗಂಡ ಬಂಗಾಳಿ ವಿಜ್ಞಾನಿ ಪ್ರೊ| ಶಂತನು ಭೌಮಿಕ್‌ ಅತ್ಯಂತ ಕಡಿಮೆ ತೂಕದ, ಥರ್ಮೋ ಪ್ಲಾಸ್ಟಿಕ್‌ ಜಾಕೆಟ್‌ ಅನ್ನು ಅಭಿವೃದ್ಧಿಪಡಿ ಸಿದ್ದಾರೆ. ಈ ಜಾಕೆಟ್‌ ಬೆಲೆ 50 ಸಾವಿರ ವಿರಲಿದ್ದು, ತೂಕ 1.5 ಕೆ.ಜಿ.ಯಿರಲಿದೆ.

ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್‌ ಪ್ರೂಫ್‌  ಜಾಕೆಟ್‌ ಅನ್ನು ಧರಿಸಲು ಹಾದಿ ಸುಗಮವಾದಂತಾಗಿದೆ. ಜತೆಗೆ ರಕ್ಷಣಾ ಇಲಾಖೆಯ ಬೊಕ್ಕಸಕ್ಕೆ ಪ್ರತಿ ವರ್ಷ 20 ಸಾವಿರ ಕೋಟಿ ರು. ಉಳಿತಾಯವಾಗಲಿದೆ.

ಯಾರೂ ಗೊತ್ತಾ ವಿಜ್ಞಾನಿ ಶಾಂತನು ಭೌಮಿಕ್ ?

ಪ್ರಸ್ತುತ ಭಾರತೀಯ ಯೋಧರಿಗೆ ಅಗ್ಗದ ಮತ್ತು ಕಡಿಮೆ ತೂಕದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಸಂಶೋಧಿಸಿರುವ, ವಿಜ್ಞಾನಿ ಶಾಂತನು ಭೌಮಿಕ್ ಮೂಲತಃ ಬಂಗಾಳ ಮೂಲದವರಾಗಿದ್ದು, ಪ್ರಸ್ತುತ ಕೊಯಮತ್ತೂರಿನ ಅಮೃತ ವಿಶ್ವವಿದ್ಯಾಲಯದಲ್ಲಿ ಏರೇಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ.  ತಮ್ಮ ವಿನೂತನ ಸಂಶೋಧನೆಯನ್ನು ವಿಜ್ಞಾನಿ ಶಾಂತನು ಭೌಮಿಕ್ ಅವರು ನೇತಾಜಿ ಸುಭಾಷ್ ಚಂದ್ರಬೋಸ್ ಅವರಿಗೆ ಸಮರ್ಪಿಸಿದ್ದಾರೆ.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

    ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.